Homeಕರ್ನಾಟಕಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

ಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರಕಾರ ಜಾರಿಗೊಳಿಸಿರುವ ‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ್ಯಾಪಿಡೋ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಿದೆ.

ಕಳೆದ ರಾತ್ರಿ 12ರಿಂದ ಇಂದು ರಾತ್ರಿ 12ರ ವರೆಗೂ ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಕೆಲವೆಡೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ. ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿದಿವೆ. ಆಟೋಗಳು ಕೆಲವೆಡೆ ಎಂದಿನಂತೆ ಸಂಚಾರ ನಡೆಸುತ್ತಿವೆ.

ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಆಟೋ ನಿಲ್ದಾಣದಲ್ಲಿ ಆಟೋ ರಸ್ತೆಗಿಳಿದಿಲ್ಲ. ಇದರಿಂದ ಮೆಜೆಸ್ಟಿಕ್​ಗೆ ಆಗಮಿಸುತ್ತಿರುವ ಜನರು ಆಟೋಗಳು ಸಿಗದೆ ಬಿಎಂಟಿಸಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಬೆಂಗಳೂರು-ತುಮಕೂರು ಹೆದ್ದಾರಿ, ಹಾಸನ ಹೆದ್ದಾರಿ, ಹೆಸರಘಟ್ಟ ರಸ್ತೆಯಲ್ಲಿ ಖಾಸಗಿ ಬಸ್​​ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ನೆಲಮಂಗಲ ಸುತ್ತ ಮುತ್ತ ಕೂಡ  ದಿನನಿತ್ಯದಂತೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ.

ಇನ್ನು ಏರ್ಪೋರ್ಟ್ ರಸ್ತೆಯ ಚಿಕ್ಕಜಾಲ‌ ಬಳಿ ಕೆಲವೊಂದು ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದಿರಂದಾಗಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆ ಕೈಗೊಂಡಿದ್ದಾರೆ. ಒಲಾ ಉಬರ್ ಸೇರಿದಂತೆ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಹೆಬ್ಬಳಾದಲ್ಲಿ ಎಂದಿನಂತೆ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಆದರೂ ಹೆಚ್ಚಿನ ಜನರು ಆಟೋ, ಒಲಾ ಬಿಟ್ಟು ಸರ್ಕಾರಿ ಬಸ್ಸುಗಳಲ್ಲಿ ಹೆಚ್ಚು ಸಂಚರಿಸಿರುವುದು ಕಂಡು ಬಂದಿದೆ.  ಅತ್ತಿಬೆಲೆಯಲ್ಲಿ ಟಿಟಿ ವಾಹನದಲ್ಲಿ ಜನರು ಸಂಚಾರ ಮಾಡುವಾಗ ಕೆಲವು ಸಂಘಟನೆಗಳು, ವಾಹನ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ.

ಬಂದ್ ಮಧ್ಯೆಯೂ ರಸ್ತೆಗಿಳಿದ ಆಟೋಗಳ ಪೈಕಿ ಕೆಲವು ಆಟೋ ಚಾಲಕರು ಹೆಚ್ಚಿನ ಹಣ ಜನರಿಂದ ವಸೂಲಿ ಮಾಡುವುದು ಕೂಡ ಕಂಡು ಬಂಡಿದೆ. ಬಂದ್‍ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಟ್ರಿಪ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್​​​ನಿಂದ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು​ ಜನದಟ್ಟಣೆಗೆ ಅನುಸಾರವಾಗಿ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಲಾಗಿದೆ. ನಾನ್ ಪೀಕ್ ಅವರ್ಸ್​​ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬಂದ್ ಅಂಗವಾಗಿ ಕೇಂದ್ರ ರೈಲ್ವೆ ನಿಲ್ದಾಣದಿಂದ ಆಟೋ, ಖಾಸಗಿ ವಾಹನಗಳ ರ್ಯಾಲಿ ನಡೆಯಲಿದ್ದು,ವಿವಿಧೆಡೆ ರಸ್ತೆ ಸಂಚಾರಗಳಲ್ಲಿ ಕೂಡ ಬದಲಾವಣೆಯನ್ನು ಮಾಡಲಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾತನಾಡಿದ್ದು, ಸತ್ತಿರುವ ಸಂಘಟನೆಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ. ಒಂದು ಸಂಘಟನೆಯಿಂದ 5 ಜನ ಬಂದಿದ್ದಾರೆ. ಬಂದ್ ಮಾಡುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಆಗಬೇಕು ಎಂದು ಅಲ್ಲ, ಇದಕ್ಕೆ ಸರ್ಕಾರವೇ ಹೊಣೆಯಾಗುತ್ತೆ ಎಂದು ನಟರಾಜ್ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆಟೋ ಚಾಲಕರಾದ ಸುನಿಲ್ ಕುಮಾರ್, ನಾನು ಜಾಲಹಳ್ಳಿ ಕ್ರಾಸ್ ಬಳಿ ಆಟೋ ಓಡಿಸುತ್ತಿದ್ದೇನೆ. ಸರಕಾರದ ರೂಲ್ಸ್‌ಗಳಿಂದ ನಮಗೆ ಭಾರೀ ತೊಂದರೆಯಾಗುತ್ತಿದೆ. ನಾವು ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬಸ್‌ಗಳು ಫ್ರೀಯಾಗಿ ಓಡಾಡುತ್ತಿದೆ. ಇದರಿಂದ ಆಟೋದವರಿಗೆ ವ್ಯವಹಾರಕ್ಕೆ ಸಮಸ್ಯೆಯಾಗುತ್ತಿದೆ. ಆಟೋ ಚಾಲಕರು ನೊಂದುಕೊಂಡಿದ್ದಾರೆ. ಇದಲ್ಲದೆ ಅನದೀಕೃತವಾಗಿ ಓಡಾಡುವ ರ್ಯಾಪಿಡೋ, ಉಬರ್‌ನಿಂದ ತೊಂದರೆಯಾಗುತ್ತಿದೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್‌ಗಳ ಸಂಘದ ಶ್ರೀನಿವಾಸ್‌ ಅವರು ಮಾತನಾಡಿದ್ದು, ರ್ಯಾಪಿಡ್‌ ಆಫ್‌ಗಳನ್ನು ನಿಷೇಧ ಮಾಡಬೇಕು, ಆಟೋ ರಿಕ್ಷಾ ಚಾಲಕರಿಗೆ ಕಲ್ಯಾಣ ಮಂಡಳಿ ಜಾರಿ ಮಾಡಬೇಕು, ಆಟೋ ಚಾಲಕರ ಮಕ್ಕಳ ವಿಧ್ಯಾಭ್ಯಾಸಕ್ಕೆ ಸ್ಕಾಲರ್‌ಶಿಪ್‌, ಪಿಂಚಣಿ, ಪಿಎಫ್‌, ಮನೆಗಳು ಸಿಗಬೇಕೆಂದು ಆಗ್ರಹಿಸಿದ್ದೇವೆ. ಈ ಬಗ್ಗೆ ಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಶಕ್ತಿ ಯೋಜನೆಯಿಂದ ಸಮಸ್ಯೆಯಾಗುತ್ತಿದೆ.  ಖಾಸಗಿ ಬಸ್‌ನವರು 10,000 ಪರಿಹಾರ ಕೇಳುತ್ತಿದ್ದಾರೆ. ರ್ಯಾಪಿಡೋ ಬಂದ್ ಮಾಡಿ, ಆಟೊ ಚಾಲಕರಿಗೆ ಸರಕಾರದಿಂದ ಪ್ರತ್ಯೇಕ ಆಫ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...