Homeಕರ್ನಾಟಕಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

ಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರಕಾರ ಜಾರಿಗೊಳಿಸಿರುವ ‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ್ಯಾಪಿಡೋ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಿದೆ.

ಕಳೆದ ರಾತ್ರಿ 12ರಿಂದ ಇಂದು ರಾತ್ರಿ 12ರ ವರೆಗೂ ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಕೆಲವೆಡೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ. ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿದಿವೆ. ಆಟೋಗಳು ಕೆಲವೆಡೆ ಎಂದಿನಂತೆ ಸಂಚಾರ ನಡೆಸುತ್ತಿವೆ.

ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಆಟೋ ನಿಲ್ದಾಣದಲ್ಲಿ ಆಟೋ ರಸ್ತೆಗಿಳಿದಿಲ್ಲ. ಇದರಿಂದ ಮೆಜೆಸ್ಟಿಕ್​ಗೆ ಆಗಮಿಸುತ್ತಿರುವ ಜನರು ಆಟೋಗಳು ಸಿಗದೆ ಬಿಎಂಟಿಸಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಬೆಂಗಳೂರು-ತುಮಕೂರು ಹೆದ್ದಾರಿ, ಹಾಸನ ಹೆದ್ದಾರಿ, ಹೆಸರಘಟ್ಟ ರಸ್ತೆಯಲ್ಲಿ ಖಾಸಗಿ ಬಸ್​​ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ನೆಲಮಂಗಲ ಸುತ್ತ ಮುತ್ತ ಕೂಡ  ದಿನನಿತ್ಯದಂತೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ.

ಇನ್ನು ಏರ್ಪೋರ್ಟ್ ರಸ್ತೆಯ ಚಿಕ್ಕಜಾಲ‌ ಬಳಿ ಕೆಲವೊಂದು ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದಿರಂದಾಗಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆ ಕೈಗೊಂಡಿದ್ದಾರೆ. ಒಲಾ ಉಬರ್ ಸೇರಿದಂತೆ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಹೆಬ್ಬಳಾದಲ್ಲಿ ಎಂದಿನಂತೆ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಆದರೂ ಹೆಚ್ಚಿನ ಜನರು ಆಟೋ, ಒಲಾ ಬಿಟ್ಟು ಸರ್ಕಾರಿ ಬಸ್ಸುಗಳಲ್ಲಿ ಹೆಚ್ಚು ಸಂಚರಿಸಿರುವುದು ಕಂಡು ಬಂದಿದೆ.  ಅತ್ತಿಬೆಲೆಯಲ್ಲಿ ಟಿಟಿ ವಾಹನದಲ್ಲಿ ಜನರು ಸಂಚಾರ ಮಾಡುವಾಗ ಕೆಲವು ಸಂಘಟನೆಗಳು, ವಾಹನ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ.

ಬಂದ್ ಮಧ್ಯೆಯೂ ರಸ್ತೆಗಿಳಿದ ಆಟೋಗಳ ಪೈಕಿ ಕೆಲವು ಆಟೋ ಚಾಲಕರು ಹೆಚ್ಚಿನ ಹಣ ಜನರಿಂದ ವಸೂಲಿ ಮಾಡುವುದು ಕೂಡ ಕಂಡು ಬಂಡಿದೆ. ಬಂದ್‍ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಟ್ರಿಪ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್​​​ನಿಂದ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು​ ಜನದಟ್ಟಣೆಗೆ ಅನುಸಾರವಾಗಿ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಲಾಗಿದೆ. ನಾನ್ ಪೀಕ್ ಅವರ್ಸ್​​ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬಂದ್ ಅಂಗವಾಗಿ ಕೇಂದ್ರ ರೈಲ್ವೆ ನಿಲ್ದಾಣದಿಂದ ಆಟೋ, ಖಾಸಗಿ ವಾಹನಗಳ ರ್ಯಾಲಿ ನಡೆಯಲಿದ್ದು,ವಿವಿಧೆಡೆ ರಸ್ತೆ ಸಂಚಾರಗಳಲ್ಲಿ ಕೂಡ ಬದಲಾವಣೆಯನ್ನು ಮಾಡಲಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾತನಾಡಿದ್ದು, ಸತ್ತಿರುವ ಸಂಘಟನೆಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ. ಒಂದು ಸಂಘಟನೆಯಿಂದ 5 ಜನ ಬಂದಿದ್ದಾರೆ. ಬಂದ್ ಮಾಡುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಆಗಬೇಕು ಎಂದು ಅಲ್ಲ, ಇದಕ್ಕೆ ಸರ್ಕಾರವೇ ಹೊಣೆಯಾಗುತ್ತೆ ಎಂದು ನಟರಾಜ್ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆಟೋ ಚಾಲಕರಾದ ಸುನಿಲ್ ಕುಮಾರ್, ನಾನು ಜಾಲಹಳ್ಳಿ ಕ್ರಾಸ್ ಬಳಿ ಆಟೋ ಓಡಿಸುತ್ತಿದ್ದೇನೆ. ಸರಕಾರದ ರೂಲ್ಸ್‌ಗಳಿಂದ ನಮಗೆ ಭಾರೀ ತೊಂದರೆಯಾಗುತ್ತಿದೆ. ನಾವು ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬಸ್‌ಗಳು ಫ್ರೀಯಾಗಿ ಓಡಾಡುತ್ತಿದೆ. ಇದರಿಂದ ಆಟೋದವರಿಗೆ ವ್ಯವಹಾರಕ್ಕೆ ಸಮಸ್ಯೆಯಾಗುತ್ತಿದೆ. ಆಟೋ ಚಾಲಕರು ನೊಂದುಕೊಂಡಿದ್ದಾರೆ. ಇದಲ್ಲದೆ ಅನದೀಕೃತವಾಗಿ ಓಡಾಡುವ ರ್ಯಾಪಿಡೋ, ಉಬರ್‌ನಿಂದ ತೊಂದರೆಯಾಗುತ್ತಿದೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್‌ಗಳ ಸಂಘದ ಶ್ರೀನಿವಾಸ್‌ ಅವರು ಮಾತನಾಡಿದ್ದು, ರ್ಯಾಪಿಡ್‌ ಆಫ್‌ಗಳನ್ನು ನಿಷೇಧ ಮಾಡಬೇಕು, ಆಟೋ ರಿಕ್ಷಾ ಚಾಲಕರಿಗೆ ಕಲ್ಯಾಣ ಮಂಡಳಿ ಜಾರಿ ಮಾಡಬೇಕು, ಆಟೋ ಚಾಲಕರ ಮಕ್ಕಳ ವಿಧ್ಯಾಭ್ಯಾಸಕ್ಕೆ ಸ್ಕಾಲರ್‌ಶಿಪ್‌, ಪಿಂಚಣಿ, ಪಿಎಫ್‌, ಮನೆಗಳು ಸಿಗಬೇಕೆಂದು ಆಗ್ರಹಿಸಿದ್ದೇವೆ. ಈ ಬಗ್ಗೆ ಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಶಕ್ತಿ ಯೋಜನೆಯಿಂದ ಸಮಸ್ಯೆಯಾಗುತ್ತಿದೆ.  ಖಾಸಗಿ ಬಸ್‌ನವರು 10,000 ಪರಿಹಾರ ಕೇಳುತ್ತಿದ್ದಾರೆ. ರ್ಯಾಪಿಡೋ ಬಂದ್ ಮಾಡಿ, ಆಟೊ ಚಾಲಕರಿಗೆ ಸರಕಾರದಿಂದ ಪ್ರತ್ಯೇಕ ಆಫ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...