Homeಕರ್ನಾಟಕಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

ಬೆಂಗಳೂರು ಬಂದ್​ಗೆ ನೀರಸ ಪ್ರತಿಕ್ರಿಯೆ: ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ, ಕೆಲವೆಡೆ ರಸ್ತೆಗಿಳಿದ ಖಾಸಗಿ ವಾಹನ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರಕಾರ ಜಾರಿಗೊಳಿಸಿರುವ ‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ್ಯಾಪಿಡೋ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಿದೆ.

ಕಳೆದ ರಾತ್ರಿ 12ರಿಂದ ಇಂದು ರಾತ್ರಿ 12ರ ವರೆಗೂ ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಕೆಲವೆಡೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ. ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿದಿವೆ. ಆಟೋಗಳು ಕೆಲವೆಡೆ ಎಂದಿನಂತೆ ಸಂಚಾರ ನಡೆಸುತ್ತಿವೆ.

ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಆಟೋ ನಿಲ್ದಾಣದಲ್ಲಿ ಆಟೋ ರಸ್ತೆಗಿಳಿದಿಲ್ಲ. ಇದರಿಂದ ಮೆಜೆಸ್ಟಿಕ್​ಗೆ ಆಗಮಿಸುತ್ತಿರುವ ಜನರು ಆಟೋಗಳು ಸಿಗದೆ ಬಿಎಂಟಿಸಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಬೆಂಗಳೂರು-ತುಮಕೂರು ಹೆದ್ದಾರಿ, ಹಾಸನ ಹೆದ್ದಾರಿ, ಹೆಸರಘಟ್ಟ ರಸ್ತೆಯಲ್ಲಿ ಖಾಸಗಿ ಬಸ್​​ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ನೆಲಮಂಗಲ ಸುತ್ತ ಮುತ್ತ ಕೂಡ  ದಿನನಿತ್ಯದಂತೆ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ.

ಇನ್ನು ಏರ್ಪೋರ್ಟ್ ರಸ್ತೆಯ ಚಿಕ್ಕಜಾಲ‌ ಬಳಿ ಕೆಲವೊಂದು ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದಿರಂದಾಗಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆ ಕೈಗೊಂಡಿದ್ದಾರೆ. ಒಲಾ ಉಬರ್ ಸೇರಿದಂತೆ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಹೆಬ್ಬಳಾದಲ್ಲಿ ಎಂದಿನಂತೆ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಆದರೂ ಹೆಚ್ಚಿನ ಜನರು ಆಟೋ, ಒಲಾ ಬಿಟ್ಟು ಸರ್ಕಾರಿ ಬಸ್ಸುಗಳಲ್ಲಿ ಹೆಚ್ಚು ಸಂಚರಿಸಿರುವುದು ಕಂಡು ಬಂದಿದೆ.  ಅತ್ತಿಬೆಲೆಯಲ್ಲಿ ಟಿಟಿ ವಾಹನದಲ್ಲಿ ಜನರು ಸಂಚಾರ ಮಾಡುವಾಗ ಕೆಲವು ಸಂಘಟನೆಗಳು, ವಾಹನ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ.

ಬಂದ್ ಮಧ್ಯೆಯೂ ರಸ್ತೆಗಿಳಿದ ಆಟೋಗಳ ಪೈಕಿ ಕೆಲವು ಆಟೋ ಚಾಲಕರು ಹೆಚ್ಚಿನ ಹಣ ಜನರಿಂದ ವಸೂಲಿ ಮಾಡುವುದು ಕೂಡ ಕಂಡು ಬಂಡಿದೆ. ಬಂದ್‍ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಟ್ರಿಪ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್​​​ನಿಂದ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು​ ಜನದಟ್ಟಣೆಗೆ ಅನುಸಾರವಾಗಿ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಲಾಗಿದೆ. ನಾನ್ ಪೀಕ್ ಅವರ್ಸ್​​ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬಂದ್ ಅಂಗವಾಗಿ ಕೇಂದ್ರ ರೈಲ್ವೆ ನಿಲ್ದಾಣದಿಂದ ಆಟೋ, ಖಾಸಗಿ ವಾಹನಗಳ ರ್ಯಾಲಿ ನಡೆಯಲಿದ್ದು,ವಿವಿಧೆಡೆ ರಸ್ತೆ ಸಂಚಾರಗಳಲ್ಲಿ ಕೂಡ ಬದಲಾವಣೆಯನ್ನು ಮಾಡಲಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾತನಾಡಿದ್ದು, ಸತ್ತಿರುವ ಸಂಘಟನೆಗಳ ಜೊತೆ ಸಿಎಂ ಸಭೆ ಮಾಡಿದ್ದಾರೆ. ಒಂದು ಸಂಘಟನೆಯಿಂದ 5 ಜನ ಬಂದಿದ್ದಾರೆ. ಬಂದ್ ಮಾಡುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಆಗಬೇಕು ಎಂದು ಅಲ್ಲ, ಇದಕ್ಕೆ ಸರ್ಕಾರವೇ ಹೊಣೆಯಾಗುತ್ತೆ ಎಂದು ನಟರಾಜ್ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆಟೋ ಚಾಲಕರಾದ ಸುನಿಲ್ ಕುಮಾರ್, ನಾನು ಜಾಲಹಳ್ಳಿ ಕ್ರಾಸ್ ಬಳಿ ಆಟೋ ಓಡಿಸುತ್ತಿದ್ದೇನೆ. ಸರಕಾರದ ರೂಲ್ಸ್‌ಗಳಿಂದ ನಮಗೆ ಭಾರೀ ತೊಂದರೆಯಾಗುತ್ತಿದೆ. ನಾವು ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬಸ್‌ಗಳು ಫ್ರೀಯಾಗಿ ಓಡಾಡುತ್ತಿದೆ. ಇದರಿಂದ ಆಟೋದವರಿಗೆ ವ್ಯವಹಾರಕ್ಕೆ ಸಮಸ್ಯೆಯಾಗುತ್ತಿದೆ. ಆಟೋ ಚಾಲಕರು ನೊಂದುಕೊಂಡಿದ್ದಾರೆ. ಇದಲ್ಲದೆ ಅನದೀಕೃತವಾಗಿ ಓಡಾಡುವ ರ್ಯಾಪಿಡೋ, ಉಬರ್‌ನಿಂದ ತೊಂದರೆಯಾಗುತ್ತಿದೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್‌ಗಳ ಸಂಘದ ಶ್ರೀನಿವಾಸ್‌ ಅವರು ಮಾತನಾಡಿದ್ದು, ರ್ಯಾಪಿಡ್‌ ಆಫ್‌ಗಳನ್ನು ನಿಷೇಧ ಮಾಡಬೇಕು, ಆಟೋ ರಿಕ್ಷಾ ಚಾಲಕರಿಗೆ ಕಲ್ಯಾಣ ಮಂಡಳಿ ಜಾರಿ ಮಾಡಬೇಕು, ಆಟೋ ಚಾಲಕರ ಮಕ್ಕಳ ವಿಧ್ಯಾಭ್ಯಾಸಕ್ಕೆ ಸ್ಕಾಲರ್‌ಶಿಪ್‌, ಪಿಂಚಣಿ, ಪಿಎಫ್‌, ಮನೆಗಳು ಸಿಗಬೇಕೆಂದು ಆಗ್ರಹಿಸಿದ್ದೇವೆ. ಈ ಬಗ್ಗೆ ಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಶಕ್ತಿ ಯೋಜನೆಯಿಂದ ಸಮಸ್ಯೆಯಾಗುತ್ತಿದೆ.  ಖಾಸಗಿ ಬಸ್‌ನವರು 10,000 ಪರಿಹಾರ ಕೇಳುತ್ತಿದ್ದಾರೆ. ರ್ಯಾಪಿಡೋ ಬಂದ್ ಮಾಡಿ, ಆಟೊ ಚಾಲಕರಿಗೆ ಸರಕಾರದಿಂದ ಪ್ರತ್ಯೇಕ ಆಫ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...