Homeಕರ್ನಾಟಕಬೆಂಗಳೂರು: ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್ ನಡೆಸುತ್ತಿರುವ ಪ್ಯಾಲೆಸ್ತೀನ್ ನಾಗರಿಕರ ಹತ್ಯಾಕಾಂಡವನ್ನು ನಿಲ್ಲಿಸಬೇಕು. ಭಾರತವು ಪ್ಯಾಲೆಸ್ತೀನ್ ಪರವಾಗಿ, ಪ್ಯಾಲೆಸ್ತೀನಿಯರ ಉಳಿವಿಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವಾರು ಮಂದಿ ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ.

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ದಬ್ಬಾಳಿಕೆ ಮತ್ತು ನರಮೇಧವನ್ನು ಹಲವಾರು ವರ್ಷಗಳಿಂದ ಹಲವು ದೇಶಗಳು ವಿರೋಧಿಸಿವೆ. ಇಸ್ರೇಲಿನ ಪ್ರಜ್ಞಾವಂತ ನಾಗರಿಕರು ಪ್ಯಾಲೆಸ್ತೀನ್ ವಿರುದ್ಧದ ಇಸ್ರೇಲ್ ನೀತಿಯನ್ನು ಮತ್ತು ಯಹೂದಿಗಳ ಪರವಾದ ಧೋರಣೆಗಳನ್ನು ಖಂಡಿಸಿದ್ದಾರೆ. ಇಡೀ ಜಗತ್ತು ಪ್ಯಾಲೆಸ್ತೀನಿಯರ ಪರ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದಲ್ಲದೆ ಪ್ಯಾಲೆಸ್ತೀನಿ ಪರ ಪ್ರತಿಭಟನೆಗಳಿಗೆ ಅವಕಾಶ ಕೊಡದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ ಇಸ್ರೇಲ್‌ ಪ್ಯಾಲೆಸ್ತೀನಿಯರನ್ನು ಹತ್ಯಾಕಾಂಡ ನಡೆಸುತ್ತಾ ಬಂದಿದೆ. ಪ್ಯಾಲೆಸ್ತೀನ್ ಭೂ ಭಾಗವನ್ನು ಆಕ್ರಮಿಸಿಕೊಂಡಿದೆ. ಇಸ್ರೇಲ್‌ ನೀತಿಯನ್ನು ಹಲವಾರು ರಾಷ್ಟ್ರಗಳು ವಿರೋಧಿಸಿವೆ. ಭಾರತದಲ್ಲಿ ಈವರೆಗಿನ ಎಲ್ಲಾ ಸರಕಾರಗಳು ಪ್ಯಾಲೆಸ್ತೀನ್‌ ನಾಗರಿಕರ ಪರವಾಗಿ ತಮ್ಮ ನಿಲುವನ್ನು ಮಂಡಿಸಿದ್ದರು. ಆದರೆ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾತ್ರ ಪ್ಯಾಲೆಸ್ತೀನಿ ಪರ ನಿಲುವು ಮಂಡಿಸದೆ ತಟಸ್ಥವಾಗಿ ಉಳಿದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಪ್ಯಾಲೆಸ್ತೀನಿ ಪರ ಕಾರ್ಯಕ್ರಮಗಳು, ಸಭೆಗಳಿಗೆ ನಡೆಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡದೆ ಇರುವ ಬಗ್ಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ಧೋರಣೆಗಳನ್ನು ಜನರ ಮೇಲೆ ಹೇರುತ್ತಿವೆ. ಪೊಲೀಸರು ಸಂವಿಧಾನದಿಂದ ಆಯ್ಕೆಯಾದವರು. ಅವರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಮನ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಚುನಾವಣೆಗೂ ಮುನ್ನ ಸಾಕಷ್ಟು ಮಾತನಾಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ರಾಜಕಾರಣಕ್ಕಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಕಡೆಗಣಿಸುತ್ತಿದೆ. ಕಾಂಗ್ರೆಸ್‌ ವರಿಷ್ಠರೆ ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ್ದಾರೆ. ಆದರೆ ಅದನ್ನು ಅನುಸರಿಸಲು ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರ 2ಬಿ ಮೀಸಲಾತಿಯನ್ನು ಮರಳಿ ತರುತ್ತೇವೆ. ಜಾತಿ ಗಣತಿಯನ್ನು ಸ್ವೀಕರಿಸಿ, ಬಿಡುಗಡೆ ಮಾಡುತ್ತೇವೆ. ಸದಾಶಿವ ಆಯೋಗ, ಕಾಂತರಾಜ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುತ್ತೇವೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಭರವಸೆ ನೀಡಿತ್ತು. ಆದರೆ ಈಗ ಕಾಂಗ್ರೆಸ್‌ ಮೌನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...