Homeಕರ್ನಾಟಕಬೆಂಗಳೂರು: ಸ್ಕೂಟರ್‌ ತಡೆದು ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಸ್ಕೂಟರ್‌ ತಡೆದು ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ

- Advertisement -
- Advertisement -
ರ‍್ಯಾಪಿಡೋ ಚಾಲಕನಿಗೆ ಅಡ್ಡಗಟ್ಟಿದ ಪ್ರತಿಭಟನಾಕಾರರು ಪ್ರಯಾಣಿಕನಿಗೆ ಮತ್ತು ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಚಾಲುಕ್ಯ ಸರ್ಕಲ್‌ ಫ್ಲೈಓವರ್‌ ಮೇಲೆ ಬರುತ್ತಿದ್ದ ರ‍್ಯಾಪಿಡೋ  ಚಾಲಕನನ್ನು ತಡೆದು ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಲು ಮುಂದಾದ ಪ್ರಯಾಣಿಕನಿಗೂ ಚಾಲಕರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರನ್ನು ಚದುರಿಸಿದ್ದಾರೆ. ಹಲ್ಲೆಗೊಳಗಾದವರನ್ನು ಅಲ್ಲಿಂದ ಕಳುಹಿಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಟ್ಯಾಕ್ಸಿ ಚಾಲಕನಿಗೆ ಕೆಲವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರ‍್ಯಾಪಿಡೋ  ಚಾಲಕನನ್ನು ಸ್ಕೂಟರ್‌ನಿಂದ ಕೆಳಗಿಳಿಸಿ ಹಲ್ಲೆ ನಡೆಸಿ, ಸ್ಕೂಟರ್‌ನ್ನು ಹಾನಿಗೈದಿದ್ದಾರೆ.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ವತಿಯಿಂದ ಕಳೆದ ರಾತ್ರಿ 12 ಗಂಟೆಯಿಂದ ಇಂದು ರಾತ್ರಿ 12ರವೆರೆಗೆ ಬಂದ್‌ ಘೋಷಿಸಲಾಗಿತ್ತು. ಸರಕಾರ ಜಾರಿಗೊಳಿಸಿರುವ ‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಿತ್ತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಖಾಸಗಿ ವಾಹನ ಸಂಘಟನೆಗಳ ಸದಸ್ಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟ ಬಂದ್‌ ಕೈ ಬಿಟ್ಟಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ರಾಮಲಿಂಗಾರೆಡ್ಡಿ ಅವರು, ಸಂಘಟನೆಗಳ ಬೇಡಿಕೆ ಆಲಿಸಿ ಬಳಿಕ ಮಾತನಾಡಿದ್ದು, ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟಗಳ ಬಹುತೇಕ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡುತ್ತೇವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಇರೋದಲ್ಲ ಹಿಂದಿನಿಂದಲೂ ಇದೆ. ಆದರೆ ಶಕ್ತಿ ಯೋಜನೆಯಿಂದ ಸಮಸ್ಯೆಯಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಓಲಾ-ಊಬರ್ ಕುರಿತ 4 ಕೇಸ್‌ಗಳು ಕೋರ್ಟ್‌ನಲ್ಲಿವೆ. ವಕೀಲರೊಂದಿಗೆ ಈ ಬಗ್ಗೆ ಚರ್ಚಿಸಿ ಬೇಗ ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಇದರ ಜೊತೆ ಬೈಕ್ ಟ್ಯಾಕ್ಸಿ ಕೇಸ್ ಸಹ ಕೋರ್ಟ್‌ನಲ್ಲಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ಬಂದ್‌’ ವಾಪಸ್‌ ಪಡೆದ ಖಾಸಗಿ ವಾಹನ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...