Homeಮುಖಪುಟಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

- Advertisement -
- Advertisement -

ಕೇರಳದಲ್ಲಿ ಅದಾನಿ ಸಮೂಹದ ಮಾಲೀಕತ್ವದ ಬಂದರಿನ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಚರ್ಚ್‌ವೊಂದರ ಬ್ಯಾಂಕ್ ಖಾತೆಗಳನ್ನು ಮೋದಿ ಸರಕಾರ ಸ್ಥಗಿತಗೊಳಿಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಮತದಾನಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಇರುವಾಗ ತಿರುವನಂತಪುರಂನ ಪ್ರಮುಖ ಲ್ಯಾಟಿನ್‌ ಚರ್ಚ್‌ ಈ ಹೇಳಿಕೆಯನ್ನು ನೀಡಿದ್ದು, ಅದಾನಿ ಗ್ರೂಪ್‌ನ  ವಿಜಿಂಜಂ ಅಂತರಾಷ್ಟ್ರೀಯ ಬಂದರು ವಿರುದ್ಧ 2022ರಲ್ಲಿ ಪ್ರತಿಭಟನೆ ಮಾಡಿದ ನಂತರ ದ್ರ ಸರ್ಕಾರವು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಖಾತೆಯ ಸ್ಥಗಿತದಿಂದ ಈಗಲೂ ಸಮಸ್ಯೆ ಮುಂದುವರಿದಿದೆ ಎಂದು ಹೇಳಿಕೊಂಡಿದೆ.

ಕೇರಳದ ರಾಜಧಾನಿಯಲ್ಲಿನ ಕರಾವಳಿಯ ಕುಗ್ರಾಮವಾದ ವಿಝಿಂಜಂ ಬಂದರಿನ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆ ನವೆಂಬರ್ 2022ರಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಭಾನುವಾರ ಚರ್ಚ್‌ನಲ್ಲಿ ನಡೆದ ಪ್ರಾರ್ಥನೆ ವೇಳೆ ಓದಲಾದ ಪತ್ರದಲ್ಲಿ ಚರ್ಚ್‌ ಈ ಮಾಹಿತಿ ಹಂಚಿಕೊಂಡಿದೆ. ಖಾತೆ ಸ್ಥಗಿತಗೊಳಿಸಿರುವ ಕಾರಣ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದೆ. ವಿವಿಧ ಲ್ಯಾಟಿನ್‌ ಚರ್ಚ್‌ಗಳಲ್ಲೂ ಈ ಪತ್ರವನ್ನು ಓದಲಾಗಿದ್ದು, ಚರ್ಚ್‌ನ ವೆಚ್ಚಗಳನ್ನು ಭರಿಸಲು ಆರ್ಥಿಕ ನೆರವು ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.

ನಾವು ನಮ್ಮ ಮಿಷನರಿ ಉದ್ದೇಶಗಳಿಗಾಗಿ ಸಹ ಹಣವನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ  ವಿಝಿಂಜಂ ಪ್ರತಿಭಟನೆಯ ನಂತರ ಅಧಿಕಾರಿಗಳು ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆ ಪರಿಸ್ಥಿತಿಯು ಈಗಲೂ ಮುಂದುವರೆದಿದೆ ಚರ್ಚಿನಲ್ಲಿ ಓದಲಾದ ಪತ್ರದಲ್ಲಿ ಹೇಳಲಾಗಿದೆ.ಚರ್ಚ್‌ನ ವಿವಿಧ ವೆಚ್ಚಗಳಿಗಾಗಿ ಭಕ್ತರಿಂದ ಹಣಕಾಸಿನ ನೆರವು ಕೋರಿ ಬರೆದ ಪತ್ರದಲ್ಲಿ ಖಾತೆ ಸ್ಥಗಿತದ ವಿಷಯವನ್ನು ಉಲ್ಲೇಖಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4ರಂದು ರಾಷ್ಟ್ರವ್ಯಾಪಿ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಕೇರಳದಲ್ಲಿ ಕ್ರಿಶ್ಚಿಯನ್‌ ಸಮುದಾಯವನ್ನು ಓಲೈಕೆ ಮಾಡಲು ಮೋದಿ ಮತ್ತು ಬಿಜೆಪಿ ಮುಂದಾಗಿತ್ತು, ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ಮೋದಿ ವಿವಿಧ ಚರ್ಚ್‌ನ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಇದೀಗ ಕೇಂದ್ರ ಸರಕಾರ ಲ್ಯಾಟಿನ್‌ ಚರ್ಚ್‌ನ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿರುವ ಮಾಹಿತಿ ಬಹಿರಂಗವಾಗಿದ್ದು, ಚುನಾವಣೆ ಹೊಸ್ತಿಲಲ್ಲೇ ಕ್ರಿಶ್ಚಿಯನ್‌ ಸಮುದಾಯ ಬಿಜೆಪಿ ವಿರುದ್ಧ ಮುನಿಸಿಕೊಳ್ಳಲು ಕಾರಣವಾಗಿದೆ.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧದ ಮೋದಿಯವರ ನಿರಂತರ ದಾಳಿ ಬುದ್ಧಿವಂತ ನಿರ್ಧಾರವಲ್ಲ: ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....