Homeಮುಖಪುಟಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

- Advertisement -
- Advertisement -

ಕೇರಳದಲ್ಲಿ ಅದಾನಿ ಸಮೂಹದ ಮಾಲೀಕತ್ವದ ಬಂದರಿನ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಚರ್ಚ್‌ವೊಂದರ ಬ್ಯಾಂಕ್ ಖಾತೆಗಳನ್ನು ಮೋದಿ ಸರಕಾರ ಸ್ಥಗಿತಗೊಳಿಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಮತದಾನಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಇರುವಾಗ ತಿರುವನಂತಪುರಂನ ಪ್ರಮುಖ ಲ್ಯಾಟಿನ್‌ ಚರ್ಚ್‌ ಈ ಹೇಳಿಕೆಯನ್ನು ನೀಡಿದ್ದು, ಅದಾನಿ ಗ್ರೂಪ್‌ನ  ವಿಜಿಂಜಂ ಅಂತರಾಷ್ಟ್ರೀಯ ಬಂದರು ವಿರುದ್ಧ 2022ರಲ್ಲಿ ಪ್ರತಿಭಟನೆ ಮಾಡಿದ ನಂತರ ದ್ರ ಸರ್ಕಾರವು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಖಾತೆಯ ಸ್ಥಗಿತದಿಂದ ಈಗಲೂ ಸಮಸ್ಯೆ ಮುಂದುವರಿದಿದೆ ಎಂದು ಹೇಳಿಕೊಂಡಿದೆ.

ಕೇರಳದ ರಾಜಧಾನಿಯಲ್ಲಿನ ಕರಾವಳಿಯ ಕುಗ್ರಾಮವಾದ ವಿಝಿಂಜಂ ಬಂದರಿನ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆ ನವೆಂಬರ್ 2022ರಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಭಾನುವಾರ ಚರ್ಚ್‌ನಲ್ಲಿ ನಡೆದ ಪ್ರಾರ್ಥನೆ ವೇಳೆ ಓದಲಾದ ಪತ್ರದಲ್ಲಿ ಚರ್ಚ್‌ ಈ ಮಾಹಿತಿ ಹಂಚಿಕೊಂಡಿದೆ. ಖಾತೆ ಸ್ಥಗಿತಗೊಳಿಸಿರುವ ಕಾರಣ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದೆ. ವಿವಿಧ ಲ್ಯಾಟಿನ್‌ ಚರ್ಚ್‌ಗಳಲ್ಲೂ ಈ ಪತ್ರವನ್ನು ಓದಲಾಗಿದ್ದು, ಚರ್ಚ್‌ನ ವೆಚ್ಚಗಳನ್ನು ಭರಿಸಲು ಆರ್ಥಿಕ ನೆರವು ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.

ನಾವು ನಮ್ಮ ಮಿಷನರಿ ಉದ್ದೇಶಗಳಿಗಾಗಿ ಸಹ ಹಣವನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ  ವಿಝಿಂಜಂ ಪ್ರತಿಭಟನೆಯ ನಂತರ ಅಧಿಕಾರಿಗಳು ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆ ಪರಿಸ್ಥಿತಿಯು ಈಗಲೂ ಮುಂದುವರೆದಿದೆ ಚರ್ಚಿನಲ್ಲಿ ಓದಲಾದ ಪತ್ರದಲ್ಲಿ ಹೇಳಲಾಗಿದೆ.ಚರ್ಚ್‌ನ ವಿವಿಧ ವೆಚ್ಚಗಳಿಗಾಗಿ ಭಕ್ತರಿಂದ ಹಣಕಾಸಿನ ನೆರವು ಕೋರಿ ಬರೆದ ಪತ್ರದಲ್ಲಿ ಖಾತೆ ಸ್ಥಗಿತದ ವಿಷಯವನ್ನು ಉಲ್ಲೇಖಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4ರಂದು ರಾಷ್ಟ್ರವ್ಯಾಪಿ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಕೇರಳದಲ್ಲಿ ಕ್ರಿಶ್ಚಿಯನ್‌ ಸಮುದಾಯವನ್ನು ಓಲೈಕೆ ಮಾಡಲು ಮೋದಿ ಮತ್ತು ಬಿಜೆಪಿ ಮುಂದಾಗಿತ್ತು, ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ಮೋದಿ ವಿವಿಧ ಚರ್ಚ್‌ನ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಇದೀಗ ಕೇಂದ್ರ ಸರಕಾರ ಲ್ಯಾಟಿನ್‌ ಚರ್ಚ್‌ನ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿರುವ ಮಾಹಿತಿ ಬಹಿರಂಗವಾಗಿದ್ದು, ಚುನಾವಣೆ ಹೊಸ್ತಿಲಲ್ಲೇ ಕ್ರಿಶ್ಚಿಯನ್‌ ಸಮುದಾಯ ಬಿಜೆಪಿ ವಿರುದ್ಧ ಮುನಿಸಿಕೊಳ್ಳಲು ಕಾರಣವಾಗಿದೆ.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧದ ಮೋದಿಯವರ ನಿರಂತರ ದಾಳಿ ಬುದ್ಧಿವಂತ ನಿರ್ಧಾರವಲ್ಲ: ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...