Homeಮುಖಪುಟಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

- Advertisement -
- Advertisement -

ಕೇರಳದಲ್ಲಿ ಅದಾನಿ ಸಮೂಹದ ಮಾಲೀಕತ್ವದ ಬಂದರಿನ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಚರ್ಚ್‌ವೊಂದರ ಬ್ಯಾಂಕ್ ಖಾತೆಗಳನ್ನು ಮೋದಿ ಸರಕಾರ ಸ್ಥಗಿತಗೊಳಿಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಮತದಾನಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಇರುವಾಗ ತಿರುವನಂತಪುರಂನ ಪ್ರಮುಖ ಲ್ಯಾಟಿನ್‌ ಚರ್ಚ್‌ ಈ ಹೇಳಿಕೆಯನ್ನು ನೀಡಿದ್ದು, ಅದಾನಿ ಗ್ರೂಪ್‌ನ  ವಿಜಿಂಜಂ ಅಂತರಾಷ್ಟ್ರೀಯ ಬಂದರು ವಿರುದ್ಧ 2022ರಲ್ಲಿ ಪ್ರತಿಭಟನೆ ಮಾಡಿದ ನಂತರ ದ್ರ ಸರ್ಕಾರವು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಖಾತೆಯ ಸ್ಥಗಿತದಿಂದ ಈಗಲೂ ಸಮಸ್ಯೆ ಮುಂದುವರಿದಿದೆ ಎಂದು ಹೇಳಿಕೊಂಡಿದೆ.

ಕೇರಳದ ರಾಜಧಾನಿಯಲ್ಲಿನ ಕರಾವಳಿಯ ಕುಗ್ರಾಮವಾದ ವಿಝಿಂಜಂ ಬಂದರಿನ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆ ನವೆಂಬರ್ 2022ರಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಭಾನುವಾರ ಚರ್ಚ್‌ನಲ್ಲಿ ನಡೆದ ಪ್ರಾರ್ಥನೆ ವೇಳೆ ಓದಲಾದ ಪತ್ರದಲ್ಲಿ ಚರ್ಚ್‌ ಈ ಮಾಹಿತಿ ಹಂಚಿಕೊಂಡಿದೆ. ಖಾತೆ ಸ್ಥಗಿತಗೊಳಿಸಿರುವ ಕಾರಣ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದೆ. ವಿವಿಧ ಲ್ಯಾಟಿನ್‌ ಚರ್ಚ್‌ಗಳಲ್ಲೂ ಈ ಪತ್ರವನ್ನು ಓದಲಾಗಿದ್ದು, ಚರ್ಚ್‌ನ ವೆಚ್ಚಗಳನ್ನು ಭರಿಸಲು ಆರ್ಥಿಕ ನೆರವು ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.

ನಾವು ನಮ್ಮ ಮಿಷನರಿ ಉದ್ದೇಶಗಳಿಗಾಗಿ ಸಹ ಹಣವನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ  ವಿಝಿಂಜಂ ಪ್ರತಿಭಟನೆಯ ನಂತರ ಅಧಿಕಾರಿಗಳು ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆ ಪರಿಸ್ಥಿತಿಯು ಈಗಲೂ ಮುಂದುವರೆದಿದೆ ಚರ್ಚಿನಲ್ಲಿ ಓದಲಾದ ಪತ್ರದಲ್ಲಿ ಹೇಳಲಾಗಿದೆ.ಚರ್ಚ್‌ನ ವಿವಿಧ ವೆಚ್ಚಗಳಿಗಾಗಿ ಭಕ್ತರಿಂದ ಹಣಕಾಸಿನ ನೆರವು ಕೋರಿ ಬರೆದ ಪತ್ರದಲ್ಲಿ ಖಾತೆ ಸ್ಥಗಿತದ ವಿಷಯವನ್ನು ಉಲ್ಲೇಖಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4ರಂದು ರಾಷ್ಟ್ರವ್ಯಾಪಿ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಕೇರಳದಲ್ಲಿ ಕ್ರಿಶ್ಚಿಯನ್‌ ಸಮುದಾಯವನ್ನು ಓಲೈಕೆ ಮಾಡಲು ಮೋದಿ ಮತ್ತು ಬಿಜೆಪಿ ಮುಂದಾಗಿತ್ತು, ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ಮೋದಿ ವಿವಿಧ ಚರ್ಚ್‌ನ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಇದೀಗ ಕೇಂದ್ರ ಸರಕಾರ ಲ್ಯಾಟಿನ್‌ ಚರ್ಚ್‌ನ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿರುವ ಮಾಹಿತಿ ಬಹಿರಂಗವಾಗಿದ್ದು, ಚುನಾವಣೆ ಹೊಸ್ತಿಲಲ್ಲೇ ಕ್ರಿಶ್ಚಿಯನ್‌ ಸಮುದಾಯ ಬಿಜೆಪಿ ವಿರುದ್ಧ ಮುನಿಸಿಕೊಳ್ಳಲು ಕಾರಣವಾಗಿದೆ.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧದ ಮೋದಿಯವರ ನಿರಂತರ ದಾಳಿ ಬುದ್ಧಿವಂತ ನಿರ್ಧಾರವಲ್ಲ: ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...