Homeಮುಖಪುಟಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

- Advertisement -
- Advertisement -

ಕೇರಳದಲ್ಲಿ ಅದಾನಿ ಸಮೂಹದ ಮಾಲೀಕತ್ವದ ಬಂದರಿನ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಚರ್ಚ್‌ವೊಂದರ ಬ್ಯಾಂಕ್ ಖಾತೆಗಳನ್ನು ಮೋದಿ ಸರಕಾರ ಸ್ಥಗಿತಗೊಳಿಸಿರುವ ಆರೋಪ ಕೇಳಿ ಬಂದಿದೆ.

ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಮತದಾನಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಇರುವಾಗ ತಿರುವನಂತಪುರಂನ ಪ್ರಮುಖ ಲ್ಯಾಟಿನ್‌ ಚರ್ಚ್‌ ಈ ಹೇಳಿಕೆಯನ್ನು ನೀಡಿದ್ದು, ಅದಾನಿ ಗ್ರೂಪ್‌ನ  ವಿಜಿಂಜಂ ಅಂತರಾಷ್ಟ್ರೀಯ ಬಂದರು ವಿರುದ್ಧ 2022ರಲ್ಲಿ ಪ್ರತಿಭಟನೆ ಮಾಡಿದ ನಂತರ ದ್ರ ಸರ್ಕಾರವು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಖಾತೆಯ ಸ್ಥಗಿತದಿಂದ ಈಗಲೂ ಸಮಸ್ಯೆ ಮುಂದುವರಿದಿದೆ ಎಂದು ಹೇಳಿಕೊಂಡಿದೆ.

ಕೇರಳದ ರಾಜಧಾನಿಯಲ್ಲಿನ ಕರಾವಳಿಯ ಕುಗ್ರಾಮವಾದ ವಿಝಿಂಜಂ ಬಂದರಿನ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆ ನವೆಂಬರ್ 2022ರಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಭಾನುವಾರ ಚರ್ಚ್‌ನಲ್ಲಿ ನಡೆದ ಪ್ರಾರ್ಥನೆ ವೇಳೆ ಓದಲಾದ ಪತ್ರದಲ್ಲಿ ಚರ್ಚ್‌ ಈ ಮಾಹಿತಿ ಹಂಚಿಕೊಂಡಿದೆ. ಖಾತೆ ಸ್ಥಗಿತಗೊಳಿಸಿರುವ ಕಾರಣ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದೆ. ವಿವಿಧ ಲ್ಯಾಟಿನ್‌ ಚರ್ಚ್‌ಗಳಲ್ಲೂ ಈ ಪತ್ರವನ್ನು ಓದಲಾಗಿದ್ದು, ಚರ್ಚ್‌ನ ವೆಚ್ಚಗಳನ್ನು ಭರಿಸಲು ಆರ್ಥಿಕ ನೆರವು ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.

ನಾವು ನಮ್ಮ ಮಿಷನರಿ ಉದ್ದೇಶಗಳಿಗಾಗಿ ಸಹ ಹಣವನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ  ವಿಝಿಂಜಂ ಪ್ರತಿಭಟನೆಯ ನಂತರ ಅಧಿಕಾರಿಗಳು ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆ ಪರಿಸ್ಥಿತಿಯು ಈಗಲೂ ಮುಂದುವರೆದಿದೆ ಚರ್ಚಿನಲ್ಲಿ ಓದಲಾದ ಪತ್ರದಲ್ಲಿ ಹೇಳಲಾಗಿದೆ.ಚರ್ಚ್‌ನ ವಿವಿಧ ವೆಚ್ಚಗಳಿಗಾಗಿ ಭಕ್ತರಿಂದ ಹಣಕಾಸಿನ ನೆರವು ಕೋರಿ ಬರೆದ ಪತ್ರದಲ್ಲಿ ಖಾತೆ ಸ್ಥಗಿತದ ವಿಷಯವನ್ನು ಉಲ್ಲೇಖಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4ರಂದು ರಾಷ್ಟ್ರವ್ಯಾಪಿ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಕೇರಳದಲ್ಲಿ ಕ್ರಿಶ್ಚಿಯನ್‌ ಸಮುದಾಯವನ್ನು ಓಲೈಕೆ ಮಾಡಲು ಮೋದಿ ಮತ್ತು ಬಿಜೆಪಿ ಮುಂದಾಗಿತ್ತು, ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ಮೋದಿ ವಿವಿಧ ಚರ್ಚ್‌ನ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಇದೀಗ ಕೇಂದ್ರ ಸರಕಾರ ಲ್ಯಾಟಿನ್‌ ಚರ್ಚ್‌ನ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿರುವ ಮಾಹಿತಿ ಬಹಿರಂಗವಾಗಿದ್ದು, ಚುನಾವಣೆ ಹೊಸ್ತಿಲಲ್ಲೇ ಕ್ರಿಶ್ಚಿಯನ್‌ ಸಮುದಾಯ ಬಿಜೆಪಿ ವಿರುದ್ಧ ಮುನಿಸಿಕೊಳ್ಳಲು ಕಾರಣವಾಗಿದೆ.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧದ ಮೋದಿಯವರ ನಿರಂತರ ದಾಳಿ ಬುದ್ಧಿವಂತ ನಿರ್ಧಾರವಲ್ಲ: ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...