Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....