Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...