Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...