Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...