Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...