Homeಮುಖಪುಟಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

ಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸೇವೆಯನ್ನು ಸುಧಾರಿಸಲು ಸ್ಥಳೀಯ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದರು. 

ಎಸ್‌ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ ಕಂಪನಿಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಈ ಸಮಸ್ಯೆಯಿಂದಾಗಿ ಮಾಹಿತಿ ದಾಖಲಿಸುವ ಪ್ರಕ್ರಿಯೆಯೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ ಗ್ರಾಹಕರಿಗೆ ಸಾಲ ನೀಡಲು ನಿರಾಕರಿಸುತ್ತಿರುವ ಪ್ರಕರಣಗಳೂ ಹೆಚ್ಚಾಗುತ್ತಿವೆ’ ಎಂದು ಎಚ್ಚರಿಸಿದ್ದಾರೆ.

ಸ್ಥಳೀಯ ಭಾಷೆಗಳನ್ನು ಮಾತನಾಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹೊರಹಾಕುತ್ತಿರುವ ಆಕ್ರೋಶ ಕುರಿತು ಮಾತನಾಡಿರುವ ನಿರ್ಮಲಾ ಸೀತಾರಾಮನ್, ‘ಬ್ಯಾಂಕ್ ಸಿಬ್ಬಂದ ನೇಮಕಾತಿ ಪ್ರಕ್ರಿಯೆಯಲ್ಲೂ ಬಹಳಷ್ಟು ಬದಲಾವಣೆ ಆಗಬೇಕಿದೆ. ನೇಮಕಾತಿಯಲ್ಲಿ ಸ್ಥಳೀಯ ಭಾಷೆ ಮಾತನಾಡುವವರಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಮತ್ತು ಸ್ಥಳೀಯ ಭಾಷೆ ಮಾತನಾಡಲು ಹೆಚ್ಚು ಒತ್ತು ನೀಡಬೇಕು’ ಎಂದಿದ್ದಾರೆ.

‘ನೇಮಕಾತಿ ಪ್ರಕ್ರಿಯೆ ಹೇಗಿರಬೇಕೆಂದರೆ, ಯಾವುದೇ ಶಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅಲ್ಲಿನ ಗ್ರಾಹಕರನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಭಾಷೆಯಲ್ಲಿ ಮಾತನಾಡಬೇಕು. ಮೇಲಾಧಿಕಾರಿಗಳಿಗೆ ಸ್ಥಳೀಯ ಭಾಷೆ ತಿಳಿದಿಲ್ಲವಾದರೂ, ಶಾಖೆಯ ಮಟ್ಟದ ಅಧಿಕಾರಿಗಳು ಸಂವಹನ ನಡೆಸುವಷ್ಟು ಸಾಮರ್ಥ್ಯ ಇರಬೇಕು’ ಎಂದಿದ್ದಾರೆ.

‘ಸ್ಥಳೀಯ ಭಾಷೆಯಲ್ಲಿ ಸಿಬ್ಬಂದಿಯ ದಕ್ಷತೆಯ ಆಧಾರದಲ್ಲಿ ಅವರ ಮೌಲ್ಯಮಾಪನ ಮಾಡುವುದನ್ನು ನಾನು ಬಲವಾಗಿ ಬೆಂಬಲಿಸುತ್ತೇನೆ. ಬೇರೆ ಬೇರೆ ಮಾತೃಭಾಷೆಯ ಸಿಬ್ಬಂದಿಯನ್ನು ಅನ್ಯ ಪ್ರದೇಶಗಳಿಗೆ ವರ್ಗಾವಣೆ ಮಾಡುವ ಬ್ಯಾಂಕ್‌ಗಳ ನೀತಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

‘ಸ್ಥಳೀಯ ಭಾಷೆ ಬಲ್ಲ ಸಿಬ್ಬಂದಿಯಿಂದ ಗ್ರಾಹಕರೊಂದಿಗೆ ಸಂವಹನ ಮತ್ತು ಸಂಬಂಧ ಉತ್ತಮವಾಗಿರುತ್ತದೆ. ಇದರಿಂದ ವ್ಯವಹಾರವೂ ಉತ್ತಮವಾಗಿರುತ್ತದೆ. ಬ್ಯಾಂಕುಗಳು ಹೆಚ್ಚು ಸಾಲ ನೀಡಲು ಸಾಧ್ಯವಾಗಲಿದೆ. ಆಪ್ತ ವಾತಾವರಣ ಸೃಷ್ಟಿಸಲು ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಉತ್ತಮ ಮಾರ್ಗ’ ಎಂದೂ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಎಸ್‌ಬಿಐ ಅಧ್ಯಕ್ಷ ಸಿ.ಎಸ್. ಸೆಟ್ಟಿ, ‘ತನ್ನ ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲೇ ಉತ್ತಮ ಸಂಪರ್ಕ ಹೊಂದಲು ಸೂಕ್ತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವತ್ತ ಬ್ಯಾಂಕ್‌ ಯೋಜನೆ ರೂಪಿಸಿದೆ. ಇದಕ್ಕೆ ಕೃತಕ ಬುದ್ಧಿಮತ್ತೆ (ಎಐ) ಸಾಧನ ನೆರವಾಗಬಲ್ಲದು. ಇದರಿಂದ ಭಾಷೆ ಕಲಿಕೆಗೆ ತ್ವರಿತ ಪರಿಹಾರ ಮತ್ತು ಉತ್ತಮ ಸೇತುವೆಯಾಗಿಯೂ ನೆರವಾಗಲಿದೆ’ ಎಂದಿದ್ದಾರೆ.

‘ಈ ನಿಟ್ಟಿನಲ್ಲಿ ‘ಸ್ಪಾರ್ಕ್‌’ ಎಂಬ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಲಾಗಿದೆ. ಭಾಷೆ ಸಂಬಂಧಿತ ಸಮಸ್ಯೆ ಸಹಿತ ಹಲವು ಸವಾಲುಗಳಿಗೆ ಇದು ಪರಿಹಾರವಾಗಿದೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...