Homeಮುಖಪುಟಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

ಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸೇವೆಯನ್ನು ಸುಧಾರಿಸಲು ಸ್ಥಳೀಯ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದರು. 

ಎಸ್‌ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ ಕಂಪನಿಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಈ ಸಮಸ್ಯೆಯಿಂದಾಗಿ ಮಾಹಿತಿ ದಾಖಲಿಸುವ ಪ್ರಕ್ರಿಯೆಯೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ ಗ್ರಾಹಕರಿಗೆ ಸಾಲ ನೀಡಲು ನಿರಾಕರಿಸುತ್ತಿರುವ ಪ್ರಕರಣಗಳೂ ಹೆಚ್ಚಾಗುತ್ತಿವೆ’ ಎಂದು ಎಚ್ಚರಿಸಿದ್ದಾರೆ.

ಸ್ಥಳೀಯ ಭಾಷೆಗಳನ್ನು ಮಾತನಾಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹೊರಹಾಕುತ್ತಿರುವ ಆಕ್ರೋಶ ಕುರಿತು ಮಾತನಾಡಿರುವ ನಿರ್ಮಲಾ ಸೀತಾರಾಮನ್, ‘ಬ್ಯಾಂಕ್ ಸಿಬ್ಬಂದ ನೇಮಕಾತಿ ಪ್ರಕ್ರಿಯೆಯಲ್ಲೂ ಬಹಳಷ್ಟು ಬದಲಾವಣೆ ಆಗಬೇಕಿದೆ. ನೇಮಕಾತಿಯಲ್ಲಿ ಸ್ಥಳೀಯ ಭಾಷೆ ಮಾತನಾಡುವವರಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಮತ್ತು ಸ್ಥಳೀಯ ಭಾಷೆ ಮಾತನಾಡಲು ಹೆಚ್ಚು ಒತ್ತು ನೀಡಬೇಕು’ ಎಂದಿದ್ದಾರೆ.

‘ನೇಮಕಾತಿ ಪ್ರಕ್ರಿಯೆ ಹೇಗಿರಬೇಕೆಂದರೆ, ಯಾವುದೇ ಶಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅಲ್ಲಿನ ಗ್ರಾಹಕರನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಭಾಷೆಯಲ್ಲಿ ಮಾತನಾಡಬೇಕು. ಮೇಲಾಧಿಕಾರಿಗಳಿಗೆ ಸ್ಥಳೀಯ ಭಾಷೆ ತಿಳಿದಿಲ್ಲವಾದರೂ, ಶಾಖೆಯ ಮಟ್ಟದ ಅಧಿಕಾರಿಗಳು ಸಂವಹನ ನಡೆಸುವಷ್ಟು ಸಾಮರ್ಥ್ಯ ಇರಬೇಕು’ ಎಂದಿದ್ದಾರೆ.

‘ಸ್ಥಳೀಯ ಭಾಷೆಯಲ್ಲಿ ಸಿಬ್ಬಂದಿಯ ದಕ್ಷತೆಯ ಆಧಾರದಲ್ಲಿ ಅವರ ಮೌಲ್ಯಮಾಪನ ಮಾಡುವುದನ್ನು ನಾನು ಬಲವಾಗಿ ಬೆಂಬಲಿಸುತ್ತೇನೆ. ಬೇರೆ ಬೇರೆ ಮಾತೃಭಾಷೆಯ ಸಿಬ್ಬಂದಿಯನ್ನು ಅನ್ಯ ಪ್ರದೇಶಗಳಿಗೆ ವರ್ಗಾವಣೆ ಮಾಡುವ ಬ್ಯಾಂಕ್‌ಗಳ ನೀತಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

‘ಸ್ಥಳೀಯ ಭಾಷೆ ಬಲ್ಲ ಸಿಬ್ಬಂದಿಯಿಂದ ಗ್ರಾಹಕರೊಂದಿಗೆ ಸಂವಹನ ಮತ್ತು ಸಂಬಂಧ ಉತ್ತಮವಾಗಿರುತ್ತದೆ. ಇದರಿಂದ ವ್ಯವಹಾರವೂ ಉತ್ತಮವಾಗಿರುತ್ತದೆ. ಬ್ಯಾಂಕುಗಳು ಹೆಚ್ಚು ಸಾಲ ನೀಡಲು ಸಾಧ್ಯವಾಗಲಿದೆ. ಆಪ್ತ ವಾತಾವರಣ ಸೃಷ್ಟಿಸಲು ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಉತ್ತಮ ಮಾರ್ಗ’ ಎಂದೂ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಎಸ್‌ಬಿಐ ಅಧ್ಯಕ್ಷ ಸಿ.ಎಸ್. ಸೆಟ್ಟಿ, ‘ತನ್ನ ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲೇ ಉತ್ತಮ ಸಂಪರ್ಕ ಹೊಂದಲು ಸೂಕ್ತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವತ್ತ ಬ್ಯಾಂಕ್‌ ಯೋಜನೆ ರೂಪಿಸಿದೆ. ಇದಕ್ಕೆ ಕೃತಕ ಬುದ್ಧಿಮತ್ತೆ (ಎಐ) ಸಾಧನ ನೆರವಾಗಬಲ್ಲದು. ಇದರಿಂದ ಭಾಷೆ ಕಲಿಕೆಗೆ ತ್ವರಿತ ಪರಿಹಾರ ಮತ್ತು ಉತ್ತಮ ಸೇತುವೆಯಾಗಿಯೂ ನೆರವಾಗಲಿದೆ’ ಎಂದಿದ್ದಾರೆ.

‘ಈ ನಿಟ್ಟಿನಲ್ಲಿ ‘ಸ್ಪಾರ್ಕ್‌’ ಎಂಬ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಲಾಗಿದೆ. ಭಾಷೆ ಸಂಬಂಧಿತ ಸಮಸ್ಯೆ ಸಹಿತ ಹಲವು ಸವಾಲುಗಳಿಗೆ ಇದು ಪರಿಹಾರವಾಗಿದೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...