Homeಕರ್ನಾಟಕ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ - ಸಿದ್ದರಾಮಯ್ಯ

‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

ರಾಜ್ಯದ ಹುಲಿ,ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ಮಂಗಳವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

“2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014 ರಲ್ಲಿ ಒಕ್ಕೂಟ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವ ಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು” ಎಂದು ನೆನಪಿಸಿಕೊಂಡಿದ್ದಾರೆ.

“ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ” ಎಂದು ಅವರು ಹೇಳಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್‌ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

“ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ದೆಹಲಿ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆ ಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ” ಎಂದು ಅವರು ಕಿಡಿ ಕಾರಿದ್ದಾರೆ.

“ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...