Homeಕರ್ನಾಟಕ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ - ಸಿದ್ದರಾಮಯ್ಯ

‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

ರಾಜ್ಯದ ಹುಲಿ,ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ಮಂಗಳವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

“2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014 ರಲ್ಲಿ ಒಕ್ಕೂಟ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವ ಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು” ಎಂದು ನೆನಪಿಸಿಕೊಂಡಿದ್ದಾರೆ.

“ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ” ಎಂದು ಅವರು ಹೇಳಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್‌ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

“ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ದೆಹಲಿ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆ ಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ” ಎಂದು ಅವರು ಕಿಡಿ ಕಾರಿದ್ದಾರೆ.

“ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...