Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...