Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...