Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...