Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...