Homeಕರೋನಾ ತಲ್ಲಣಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕಟ್ಟಡ ಕಾರ್ಮಿಕರಿಗೆ, ಆಟೋರಿಕ್ಷಾ ಚಾಲಕರಿಗೆ, ಹೂವು ಹಣ್ಣು ಬೆಳೆಗಾರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವನ್ನು ನೀಡುವ 1250 ಕೋಟಿ ರೂ ಮೊತ್ತದ ಲಾಕ್‌ಡೌನ್ ಪ್ಯಾಕೇಜನ್ನು ಘೋಷಿಸಿತ್ತು. ಸರ್ಕಾರ ಮೊದಲ ಹಂತದ ಪ್ಯಾಕೇಜ್ ಘೋಷಿಸಿ ತಿಂಗಳು ಕಳೆದರು ಬಹುತೇಕರಿಗೆ ಸರ್ಕಾರದ ಆರ್ಥಿಕ ನೆರವು ಇದುವರೆಗೆ ತಲುಪಿಲ್ಲ. ಸರ್ಕಾರ ಘೋಷಿಸಿದ 2000 ರೂಪಾಯಿಗಳ ಆರ್ಥಿಕ ನೆರವು ಕೆಲವರ ಖಾತೆ ಜಾಮ ಆಗಿದೆ. ಜಮಾ ಆದ ಹಣ ಜನರ ಕೈಗೆ ಸೇರದೇ ಕೇಂದ್ರ ಸರ್ಕಾರದ ಹಲವು ಸಾಲ ಯೋಜನೆಗಳ ಕಂತಿಗೆ ಕಡಿತವಾಗಿಬಿಟ್ಟಿದೆ. ಸರ್ಕಾರದ ಆರ್ಥಿಕ ನೆರವಿನ ನೀರಿಕ್ಷೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳು ಕೈಗೆ ಬಂದ ತುತ್ತು ಬಾಯಿಗೆ ಬರದೆ ಕಷ್ಟಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.9 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಬಹುತೇಕರು ಇನ್ನೂ ಸರ್ಕಾರದ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ 2000 ರೂಗಳನ್ನು ಜನರ ಖಾತೆಗೆ ಹಾಕುತ್ತಿದ್ದಂತೆಯೇ ವಿವಿಧ ಸಾಲಗಳ ಕಂತಿಗೆ ಸರ್ಕಾರದ ಹಣ ಕಡಿತವಾಗಿದೆ  ಎಂದು  ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಟಕ್ಕೆ ಗುರಿಯಾಗಿದ್ದೆ. ಸರ್ಕಾರ 2,000 ರೂಪಾಯಿಗಳ ಸಹಾಯವನ್ನು ಮಾಡುತ್ತದೆ ಎಂದು ಕೇಳಿ ಖುಷಿಯಾಯಿತು. ಸರ್ಕಾರ ಹಣ ಹಾಕಿದ ತಕ್ಷಣ ಬ್ಯಾಂಕ್‌ನವರು ಅದನ್ನು ಕಡಿತ ಮಾಡಿಕೊಂಡು ಬಿಟ್ಟರು. ಸರ್ಕಾರದ ಸಹಾಯ ಕೇವಲ ಹೆಸರಿಗಷ್ಟೆ ಸೀಮಿತವಾಯಿತು ಎಂದು ಬೀದಿಬದಿ ವ್ಯಾಪಾರಿ ನಾರಾಯಣ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬ್ಯಾಂಕ್ ಖಾತೆಗೆ ಹಣಬಂದಿರುವುದಾಗಿ ನನಗೆ ಎಸ್‌ಎಂಎಸ್‌ ಬಂತು. ಹಣ ಪಡೆದುಕೊಳ್ಳಲು ಬ್ಯಾಂಕ್‌ಗೆ ಹೋದರೆ ಸರ್ಕಾರ ಹಾಕಿದ ಹಣ ನಿಮ್ಮ ಪಿಎಂ ಸ್ವನಿಧಿ ಯೋಜನೆಯ ಸಾಲಕ್ಕೆ ಕಡಿತವಾಗಿದೆ ಎಂದು ಬ್ಯಾಂಕ್‌ನವರು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಕೇಂದ್ರ ಸರ್ಕಾರದ ಯೋಜನೆಗೆ ಕಡಿತವಾದರೆ ನಮ್ಮಂತಹ ಬೀದಿ ಬದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಮತ್ತೊಬ್ಬ ಬೀದಿ ಬದಿ ವ್ಯಾಪಾರಿ ಶಿವಪ್ರಸಾದ್ ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯವರು ಕಳೆದ ವರ್ಷ ಅತಿಹೆಚ್ಚು ಪಿಎಂ ಸ್ವ ನಿಧಿ ಯೋಜನೆಯನ್ನು ವ್ಯಾಪಕವಾಗಿ ಜನರಿಗೆ ತಲುಪಿಸಬೇಕು ಎಂಬ ಕಾರಣಕ್ಕೆ ಅನೇಕ ಬೀದಿ ಬದಿ ವ್ಯಾಪಾರಿಗಳಿಗೆ ಕೆಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಿದರು. ಈಗ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರಬೇಕಾದರೆ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ 2000 ರೂ. ಆರ್ಥಿಕ ನೆರವನ್ನು ನೀಡಿವುದಾಗಿ ಘೋಷಿಸಿದೆ. ಸರ್ಕಾರದ ನೆರವು ಬಹುತೇಕ ಬೀದಿ ಬದಿ ವ್ಯಾಪಾರಿಗಳಿಗೆ ಇದು ವರೆಗೆ ತಲುಪಿಲ್ಲ. ಸರ್ಕಾರ ನೆರವು ನೀಡುವಲ್ಲಿ ಕೂಡ ಬಿಪಿಎಲ್-ಎಪಿಲ್ ಗೊಂದಲ ಸೃಷ್ಟಿಯಾಗಿದೆ. ಕೇವಲ ಬೆರಳೆಣಿಕೆಯಷ್ಟು  ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ಜಮೆಯಾಗಿದೆ. ಜಮೆಯಾದ ಹಣವನ್ನು ಬ್ಯಾಂಕ್‌ಗಳು ಜನರಿಗೆ ತಿಳಿಸದೇ ಪಿಎಂ ಸ್ವಾಧೀನ ಯೋಜನೆಗೆ ಕಡಿತಗೊಳಿಸಿಕೊಂಡಿದ್ದಾರೆ ಎಂದು ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಕರ್ನಾಟಕದಲ್ಲಿ ಸುಮಾರು 95,000 ಜನ ಬೀದಿ ಬದಿ ವ್ಯಾಪಾರಿಗಳು ಕೆಂದ್ರ ಸರ್ಕಾರದ ಸ್ವ ನಿಧಿ ಯೋಜನೆಯ ಅಡಿಯಲ್ಲಿ ಕಳೆದ ವರ್ಷದ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾಲ ಪಡೆದಿದ್ದರು. ಇವರೆಲ್ಲರ ಖಾತೆಯಿಂದ ರಾಜ್ಯ ಸರ್ಕಾರ ಹಾಕಿದ 2000 ಸಹಾಯಧನ ಕೇಂದ್ರ ಸರ್ಕಾರದ ಯಜನೆಯ ಸಾಲಕ್ಕೆ ಕಡಿತವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಇವರಲ್ಲಿ ಕೇವಲ 1.9ಲಕ್ಷ ಜನರಿಗೆ ಮಾತ್ರ ಸರ್ಕಾರ ಆರ್ಥಿಕ ನೆರವನ್ನು ನೀಡಿದೆ. ಈ 1.9 ಲಕ್ಷ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರ ಖಾತೆಯಿಂದ ಸರ್ಕಾರ 2000 ರೂಪಾಯಿ ಹಣ ಹಾಕಿದ ಮರು ಕ್ಷಣ ಅದೇ ಹಣ ಕಡಿತಗೊಂಡಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಮಾಹಿತಿ ನೀಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ನೆರವಿನ ಹಣವನ್ನು ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಸೂಚಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ರಂಗಸ್ವಾಮಿಯವರು ತಿಳಿಸಿದ್ದಾರೆ.

ಒಂದು ಸಲ ಖಾತೆಗೆ ಹಣ ಜಮೆಯಾದರೆ ಅದು ಆಟೋಮೆಟಿಕ್ ಆಗಿ ಕಡಿತಗೊಳ್ಳುತ್ತದೆ. ಜಮೆಯಾದ ಹಣ ಸರ್ಕಾರದ ನೆರವು ಇರಬಹುದು ಅಥವಾ ಬೇರೆ ಹಣ ಇರಬಹುದು ಅದು ಯಾವುದೆಂದು ಮುಖ್ಯವಾಗುವುದಿಲ್ಲ. ಸಾಲದ ಕಂತುಗಳಿಗೆ ಹಣ ಕಡಿತವಾಗುತ್ತದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್‌ ಸಂಕಷ್ಟದಲ್ಲಿ ನಲುಗಿದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಆರ್ಥಿಕ ನೆರವಿನಿಂದ ಒಂದಷ್ಟು ನಿರಾಳರಾಗಿದ್ದರು. ರಾಜ್ಯ ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳು ಕಡಿತಗೊಳಿಸಿಕೊಂಡ ಪರಿಣಾಮ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಇದನ್ನೂ ಓದಿ :ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...