Homeಮುಖಪುಟಬ್ಯಾಂಕ್‌ಗಳ ಖಾಸಗೀಕರಣಕ್ಕೆ ವಿರೋಧ: ಮಾರ್ಚ್‌ 15, 16ಕ್ಕೆ 10 ಲಕ್ಷ ಬ್ಯಾಂಕ್ ನೌಕರರ ಮುಷ್ಕರ

ಬ್ಯಾಂಕ್‌ಗಳ ಖಾಸಗೀಕರಣಕ್ಕೆ ವಿರೋಧ: ಮಾರ್ಚ್‌ 15, 16ಕ್ಕೆ 10 ಲಕ್ಷ ಬ್ಯಾಂಕ್ ನೌಕರರ ಮುಷ್ಕರ

- Advertisement -
- Advertisement -

ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15-16 ರಂದು ಪ್ರತಿಭಟನೆ ನಡೆಸಲಿದೆ.

ಬ್ಯಾಂಕ್ ನೌಕರರ ಯೂನಿಯನ್‌ಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮಾ.4, 9 ಮತ್ತು 10ರಂದು ನಡೆದಿದ್ದ ಸಂಧಾನ ಮಾತುಕತೆಗಳು ವಿಫಲಗೊಂಡಿದ್ದವು. ಹಾಗಾಗಿ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮಾ.15 ಮತ್ತು 16ರಂದು ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ವು ಗುರುವಾರ ತಿಳಿಸಿದೆ.

ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗೀಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ಸರ್ಕಾರವು ಒಪ್ಪಿಕೊಂಡರೆ ಮುಷ್ಕರದ ಕರೆಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ಪರಿಶೀಲಿಸುವುದಾಗಿ ಯೂನಿಯನ್‌ಗಳು ಹೇಳಿವೆ.

ಇಷ್ಟು ದಿನ ಬ್ಯಾಂಕುಗಳ ವಿಲೀನದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಾಡಲು ಮುಂದಾಗಿದೆ. ಈ ಕುರಿತು ನೀತಿ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದು, ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಸಿದ್ದವಾಗುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: “ಯೆಸ್ ಬ್ಯಾಂಕ್ ಪುನಶ್ಚೇತನಕ್ಕೆ ಕೇಂದ್ರ ತೆಗೆದುಕೊಂಡಿರುವ ಕ್ರಮಗಳು ಭವಿಷ್ಯದಲ್ಲಿ ಜನರಲ್ಲಿ ಅಪನಂಬಿಕೆಯನ್ನು ಹುಟ್ಟಿಸುತ್ತವೆ”

2017 ರಿಂದಲೂ ಕೇಂದ್ರ ಸರ್ಕಾರ ಈ ಬಗ್ಗೆ ಯೋಚಿಸುತ್ತಿದೆ. ಆದರೆ ಬ್ಯಾಂಕ್‌ ನೌಕರರ ವ್ಯಾಪಕ ವಿರೋಧದಿಂದಾಗಿ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ಪ್ರಸ್ತುತ ಇರುವ ಕೊರೊನಾ ಲಾಕ್‌ಡೌನ್‌ನ ಲಾಭ ಪಡೆದು ಖಾಸಗೀಕರಣಗೊಳಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ ಪಂಜಾಬ್ ಸಿಂಧ್‌ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎನ್ನಲಾಗಿದೆ.

ನೀತಿ ಆಯೋಗವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗಿಯವರು ದೀರ್ಘಕಾಲದ ಬಂಡವಾಳ ಹೂಡಲು ಅವಕಾಶ ಮಾಡಿಕೊಡುವಂತೆ ಹಾಗೂ ಆಯ್ದ ಕೆಲ ಕೈಗಾರಿಕಾ ಸಂಸ್ಥೆಗಳ ಸಮೂಹಗಳಿಗೆ ಸಾಲ ಕೊಡದಂತೆ ತಾಕೀತು ಮಾಡಿ ಖಾಸಗೀಕರಗೊಳಿಸಬೇಕು ಎಂದು ಶಿಫಾರಸ್ಸು ಮಾಡಿದೆ.


ಇದನ್ನೂ ಓದಿ: ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...