Homeಮುಖಪುಟಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ಗ್ರಾಹಕರ ಅನುಮತಿ ಪಡೆಯದೆ ವಿಮಾ ಯೋಜನೆಗಳಿಗೆ ಸೇರ್ಪಡೆ, ಖಾತೆಯಿಂದ ಹಣ ಕಡಿತ!

- Advertisement -
- Advertisement -

ಮೋದಿ ಸರ್ಕಾರದ ಪ್ರಧಾನ ಮಂತ್ರಿ ‘ಜೀವನ ಜ್ಯೋತಿ ಭೀಮಾ ಯೋಜನೆ’ ಸೇರಿದಂತೆ ಇನ್ನಿತರ ಹಲವು ವಿಮಾ ಯೋಜನೆಗಳಿಗೆ ಜನರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್‌ಗಳು ಅವರನ್ನು ಸೇರಿಸಿ ಖಾತೆಗಳಿಂದ ಪ್ರೀಮಿಯಂ ಮೊತ್ತ ಕಡಿತ ಮಾಡುತ್ತಿರುವುದು ಬಯಲಾಗಿದೆ. ಯೋಜನೆಗಳಿಗೆ ಜನರನ್ನು ಸೇರಿಸುವಾಗ ಬೇಕಿರುವ ದಾಖಲೆಗಳನ್ನು ಮತ್ತು ಮಾಹಿತಿಗಳನ್ನು ಬ್ಯಾಂಕ್‌ಗಳೇ ಸೃಷ್ಟಿಸುತ್ತಿವೆ ಎಂದು artical-14.com ನ ತನಿಖಾ ವರದಿ ತಿಳಿಸಿದೆ.

ಮಾಧ್ಯಮ ವರದಿಗಳು ಮತ್ತು ಸಾರ್ವಜನಿಕರ ದೂರುಗಳ ಹೊರತಾಗಿಯೂ, ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಕಡಿಮೆ ವೆಚ್ಚದ ಜೀವ ವಿಮೆ ಮತ್ತು ಅಪಘಾತ ವಿಮೆ ಯೋಜನೆಗಳಿಗೆ ಗ್ರಾಹಕರನ್ನು ನೋಂದಾಯಿಸಲು ಬ್ಯಾಂಕ್‌ಗಳು ಅವರ ಖಾತೆಗಳಿಂದ ಅನುಮತಿಯಿಲ್ಲದೆ ಹಣ ಕಡಿತ ಮಾಡುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಗುರಿ ಪೂರೈಸಲು ಬ್ಯಾಂಕ್‌ಗಳು ಗ್ರಾಹಕರ ಖಾತೆಗಳಿಂದ ಸಾಮೂಹಿಕವಾಗಿ ಹಣ ಕಡಿತ ಮಾಡುತ್ತಿವೆ. ಕೆಲ ಸಂದರ್ಭಗಳಲ್ಲಿ ಗ್ರಾಹಕರ ಒಪ್ಪಿಗೆಯನ್ನು ನಕಲಿಸುವುದು ಮತ್ತು ಅದನ್ನು ಮರೆಮಾಚಲು ಸ್ಥಳೀಯ ಕಚೇರಿಗಳಿಗೆ ಸೂಚಿಸುವುದು ಮಾಡುತ್ತಿದೆ ಎಂದು ತನಿಖಾ ವರದಿ ಹೇಳಿದೆ.

ಬ್ಯಾಂಕ್‌ಗಳು ಮೋದಿ ಸರ್ಕಾರದ ವಿಮಾ ಯೋಜನೆಗಳಿಗಾಗಿ ತಮ್ಮ ಖಾತೆಗಳಿಂದ ಹಣ ಕಡಿತಗೊಳಿಸುವುದರ ವಿರುದ್ಧ ಹೆಚ್ಚಿನ ಗ್ರಾಹಕರು ಆಕ್ರೋಶಗೊಂಡಿದ್ದಾರೆ. ಬ್ಯಾಂಕ್ ಶಾಖೆಗಳಿಗೆ ತೆರಳಿ ದಬಾಯಿಸಿದ್ದಾರೆ. ಇಂತಹ ಕೆಲವು ಗ್ರಾಹಕರಿಂದ ಕಡಿತ ಮಾಡಿದ್ದ ಹಣವನ್ನು ಬ್ಯಾಂಕ್‌ಗಳು ಹಿಂದಿರುಗಿಸಿವೆ. ಇನ್ನೂ ಕೆಲವರು ನ್ಯಾಯಾಲಯಗಳ ಮೆಟ್ಟಿಲೇರಿದ್ದಾರೆ. ಅವರೊಂದಿಗೆ ರಾಜಿ ಸಂಧಾನಕ್ಕಾಗಿ ಬ್ಯಾಂಕ್‌ಗಳು ಅಲವತ್ತುಕೊಂಡಿವೆ. ಇದಕ್ಕೆ ಕ್ಯಾರೇ ಎನ್ನದ ಗ್ರಾಹಕರು. “ಇದು ಕೇವಲ ಹಣದ ಪ್ರಶ್ನೆಯಲ್ಲ, ಇದು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಮಾಡುತ್ತಿರುವ ವಂಚನೆಯಾಗಿದೆ. ಇದನ್ನು ನಿಲ್ಲಿಸಲೇಬೇಕಿದೆ” ಎಂದು ಕಾನೂನು ಸಮರ ಮುಂದುರೆಸಿದ್ದಾರೆ.

ಬಿಹಾರದ ಸರನ್ ಜಿಲ್ಲೆಯ ಇಂಜಿನಿಯರಿಂಗ್ ಪದವೀಧರ ಕುಂದನ್ ಕುಮಾರ್ ಕಳೆದೊಂದು ವರ್ಷದಿಂದಲೂ ತಾನು ಖರೀದಿಸದ ವಿಮಾ ಪಾಲಿಸಿಯಿಂದ ಹೊರ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು artical-14.com ತಿಳಿಸಿದೆ.

ಕುಮಾರ್ ಅವರ ಅನುಮತಿಯಿಲ್ಲದೇ ಅವರ ಖಾತೆಯಿಂದ ಬ್ಯಾಂಕ್‌ ಹಣವನ್ನು ಕಡಿತಗೊಳಿಸಿದೆ. ಅವರ ಹೆಸರನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ)ಗೆ ಸೇರಿಸಿದೆ.

ಕುಮಾರ್ ಅವರು ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ನಲ್ಲಿ ಖಾತೆ ಹೊಂದಿದ್ದು, 2022 ಡಿಸೆಂಬರ್‌ 29ರಂದು ಬ್ಯಾಂಕ್‌ ಅವರ ಖಾತೆಯಿಂದ ಹಣ ಕಡಿತಗೊಳಿಸಿದೆ. ದಿನಗಳ ಬಳಿಕ ಈ ಕುರಿತು ಅರಿವಾದಾಗ, ಕುಮಾರ್ ಮಾಹಿತಿ ಹಕ್ಕು ಕಾಯ್ದೆಯಡಿ(ಆರ್‌ಟಿಐ) ಬ್ಯಾಂಕ್‌ನಿಂದ ವಿಮಾ ಪಾಲಿಸಿಗೆ ತನ್ನ ಅರ್ಜಿಯ ಪ್ರತಿಯನ್ನು ಕೋರಿದ್ದರು. ಸದ್ರಿ ವಿಮೆಗಾಗಿ ಯಾವುದೇ ಅರ್ಜಿಯು ಕಂಡು ಬಂದಿಲ್ಲ ಎಂದು ಬ್ಯಾಂಕ್‌ 2023, ಫೆ.2ರಂದು ನೀಡಿದ್ದ ಉತ್ತರದಲ್ಲಿ ತಿಳಿಸಿತ್ತು.

ಬ್ಯಾಂಕ್‌ಗಳು ಇತರ ವಿಮಾ ಯೋಜನೆಗಳಿಗೂ ಗ್ರಾಹಕರ ಅನುಮತಿ ಇಲ್ಲದೆ ಸೇರಿಸುತ್ತಿದೆ. “ನನ್ನ ಖಾತೆಯಿಂದ ಕಡಿತಗೊಳಿಸಿರುವ ಹಣವನ್ನು ಬ್ಯಾಂಕ್ ವಾಪಸ್ ಕೊಟ್ಟಿಲ್ಲ. ಈ ಕೊಳಕು ವ್ಯವಸ್ಥೆಯಿಂದ ಹೊರ ಬರಲು ನಾನು ಮಾರ್ಗ ಹುಡುಕುತ್ತಿದ್ದೇನೆ” ಎಂದು artical-14.com ಗೆ ಕುಮಾರ್ ಹೇಳಿದ್ದಾರೆ.

ಜೀವ ವಿಮೆಯಲ್ಲದೆ ಬ್ಯಾಂಕ್‌ಗಳು ಗ್ರಾಹಕರ ಅನುಮತಿಯಿಲ್ಲದೆ ಅವರನ್ನು ಅಪಘಾತ ವಿಮೆಯಾಗಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ಪಿಎಂಎಸ್ಬಿವೈ), ಅಟಲ್ ಪಿಂಚಣಿ ಯೋಜನೆ (ಎಪಿವೈ)ಗೂ ಸೇರಿಸಿ ಖಾತೆಗಳಿಂದ ಹಣ ಕಡಿತಗೊಳಿಸುತ್ತಿವೆ.

ಕುಮಾರ್ ಒಪ್ಪಿಗೆಯಿಲ್ಲದೆ ಅವರನ್ನು ಪಿಎಂಜೆಜೆಬಿವೈಗೆ ಸೇರಿಸಿದ್ದರೆ, ಅವರ ತಾಯಿಯ ಹೆಸರನ್ನು ಒಪ್ಪಿಗೆ ಪಡೆಯದೇ ಎಪಿವೈಗೆ ಸೇರಿಸಲಾಗಿದೆ. ಪಿಎಂಜೆಜೆಬಿವೈಗೆ ವಾರ್ಷಿಕ ಪ್ರೀಮಿಯಂ 436 ರೂ.ಗಳಾಗಿದ್ದರೆ ಪಿಎಂಎಸ್‌ಬಿವೈಗೆ 20 ರೂ.ಗಳಾಗಿವೆ. ಗ್ರಾಹಕರು ಒಮ್ಮೆ ಈ ಯೋಜನೆಗಳಿಗೆ ಚಂದಾದಾರರಾದರೆ ಪ್ರತಿ ವರ್ಷ ಅವರ ಖಾತೆಯಿಂದ ಹಣ ಕಡಿತವಾಗುತ್ತಲೇ ಇರುತ್ತದೆ.

ಪಿಎಂಜೆಜೆಬಿವೈ ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ ಪಾಲಿಸಿದಾರನ ನಾಮಿನಿಗೆ 2 ಲಕ್ಷ ರೂ.ಗಳ ವಿಮೆ ಹಣವನ್ನು ನೀಡುತ್ತದೆ. ಪಿಎಂಎಸ್‌ಬಿವೈ ಅಪಘಾತದಿಂದ ಸಾವು ಸಂಭವಿಸಿದರೆ 2 ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡರೆ 1 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸುತ್ತದೆ. ಎಪಿವೈ 60 ವರ್ಷ ವಯಸ್ಸಿನ ಬಳಿಕ 5,000 ರೂ.ವರೆಗೂ ಮಾಸಿಕ ಪಿಂಚಣಿಯನ್ನು ನೀಡುತ್ತದೆ. ಇದು ಮಾಸಿಕ ಶುಲ್ಕವು ಆಯ್ಕೆ ಮಾಡಿದ ಪಿಂಚಣಿ ಪ್ಲಾನ್ ಅನ್ನು ಅವಲಂಬಿಸಿರುತ್ತದೆ.

ಹೆಚ್ಚಿನ ಸಂದರ್ಭಗಳಲ್ಲಿ ಅನುಮತಿಯಿಲ್ಲದೆ ಯೋಜನೆಗಳಿಗೆ ನೋಂದಾಯಿತರಾದವರಿಗೆ ತಾವು ವಿಮಾ ರಕ್ಷಣೆಗಾಗಿ ಪ್ರೀಮಿಯಂ ನೀಡುತ್ತಿದ್ದೇವೆ ಎನ್ನುವುದೂ ಗೊತ್ತಿರುವುದಿಲ್ಲ. ಇದು ದುರಂತ ಸಂಭವಿಸಿದ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರು ಯೋಜನೆಯ ಲಾಭಗಳನ್ನು ಪಡೆಯುವುದನ್ನು ತಡೆಯುತ್ತದೆ ಮತ್ತು ಅನುಮತಿಯಿಲ್ಲದೆ ಕಡಿತಗೊಂಡ ಪ್ರೀಮಿಯಂ ಹಣವೂ ವ್ಯರ್ಥವಾಗುತ್ತದೆ.

ಪಾಲಿಸಿದಾರರ/ಖಾತೆದಾರರ ಒಪ್ಪಿಗೆಯಿಲ್ಲದೆ ವಿಮೆ ಯೋಜನೆಗಳನ್ನು ಸಕ್ರಿಯಗೊಳಿಸುವಾಗ ಸುಳ್ಳು ಮಾಹಿತಿಗಳನ್ನು ನಮೂದಿಸಲಾಗುತ್ತದೆ ಎಂದು ಬ್ಯಾಂಕ್ ಉದ್ಯೋಗಿಗಳೇ ಒಪ್ಪಿಕೊಂಡಿದ್ದಾರೆ.

artical-14.comಗೆ ಲಭ್ಯವಾಗಿರುವ ಇಂತಹ ಗ್ರಾಹಕರ ಪಾಲಿಸಿಗಳು ಬೋಗಸ್ ನಾಮಿನಿಗಳನ್ನು ತೋರಿಸಿವೆ. ಇದು ಯೋಜನೆಯ ಲಾಭಗಳನ್ನು ಪಡೆದುಕೊಳ್ಳಲು ಪಾಲಿಸಿದಾರನ ಕುಟುಂಬಕ್ಕೆ ನಿರ್ಬಂಧವನ್ನೂ ಒಡ್ಡುತ್ತದೆ.

ಬ್ಯಾಂಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸಂಘಗಳು ಈ ಯೋಜನೆಗಳಿಗಾಗಿ ಗ್ರಾಹಕರ ಖಾತೆಗಳಿಂದ ಅನಧಿಕೃತವಾಗಿ ಹಣವನ್ನು ಕಡಿತಗೊಳಿಸುವ ಅವ್ಯವಹಾರವನ್ನು ವಿರೋಧಿಸಿವೆ. ಆದರೆ, ಬ್ಯಾಂಕ್‌ಗಳು ಇದಕ್ಕೆ ಸೊಪ್ಪು ಹಾಕುತ್ತಿಲ್ಲ.

ಈ ಅವ್ಯವಹಾರವನ್ನು ಸಾಂಸ್ಥಿಕಗೊಳಿಸಲಾಗಿದೆ ಮತ್ತು ಬ್ಯಾಂಕ್‌ಗಳ ಪ್ರಾದೇಶಿಕ, ವಲಯ ಮತ್ತು ಮುಖ್ಯ ಕಚೇರಿಗಳು ಸಹ ಈ ವಂಚನೆಗಳನ್ನು ಕಾರ್ಯಗತಗೊಳಿಸುತ್ತಿವೆ. ಅದನ್ನು ಮರೆಮಾಚುವಂತೆ ಶಾಖೆಗಳನ್ನು ಒತ್ತಾಯಿಸುತ್ತವೆ ಎನ್ನುವುದನ್ನು ಹೊಸ ಸಾಕ್ಷ್ಯಾಧಾರಗಳು ಬಹಿರಂಗಗೊಳಿಸಿವೆ ಎಂದು artical-14 ವರದಿಯಲ್ಲಿ ತಿಳಿಸಿದೆ.

ಬಡವರಿಗೆ ಆರ್ಥಿಕ ಭದ್ರತೆ ಒದಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಡಿಮೆ ವೆಚ್ಚದ ಕಲ್ಯಾಣ ಯೋಜನೆಗಳನ್ನು ಮೇ 2015 ರಲ್ಲಿ ಪ್ರಾರಂಭಿಸಿದರು. ಸರ್ಕಾರದ ಒತ್ತಡದ ಕಾರಣ ಮೊದಲಿನಿಂದಲೂ, ಬ್ಯಾಂಕ್‌ಗಳು ಈ ಯೋಜನೆಗಳಿಗೆ ಗ್ರಾಹಕರನ್ನು ಮೋಸದ ಮಾರ್ಗಗಳ ಮೂಲಕ ಸೇರಿಸುತ್ತಿರುವ ಆರೋಪ ಕೇಳಿ ಬಂದಿದೆ.

ಈ ವರದಿಯಲ್ಲಿ artical-14 ಉಲ್ಲೇಖಿಸಿದ ಬಿಹಾರದ ಒಬ್ಬ ವ್ಯಕ್ತಿಯ ಉದಾಹರಣೆಯನ್ನು ಮಾತ್ರ ವಿವರಿಸಿದ್ದೇವೆ. artical-14 ವರದಿಯಲ್ಲಿ ವಂಚನೆಗೊಳಗಾದ ಇನ್ನಷ್ಟು ಗ್ರಾಹಕ ಸಮಸ್ಯೆಗಳನ್ನು ವಿಸ್ಕೃತವಾಗಿ ಬಿಚ್ಚಿಡಲಾಗಿದೆ.

ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗಳಿಗೆ ಗ್ರಾಹಕರನ್ನು ಸೇರಿಸಿ, ಅವರ ಖಾತೆಗಳಿಂದ ಹಣ ಕಡಿತಗೊಳಿಸಿರುವ ಕುರಿತು ಅನೇಕ ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. artical-14 ಪ್ರಕಾರ, ಬ್ಯಾಂಕ್‌ ಹೇಳದೆ ಕೇಳದೆ ಯುವ ಜನರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಗ್ರಾಹಕರ ಖಾತೆಗಳಿಂದ ಹಣ ಕಡಿತ ಮಾಡುತ್ತಿದೆ. ಕೆಲವರಿಗೆ ಕಡಿತವಾಗುವ ಹಣ ಬಹಳ ಕಡಿಮೆ ಇದೆಯಲ್ಲವೇ ಎಂದನಿಸಿದರೂ, ಬಡ-ಮಧ್ಯಮ ವರ್ಗದವರಿಗೆ ಅದೊಂದು ದೊಡ್ಡ ಮೊತ್ತವಾಗಿದೆ. ಒಂದೊಂದು ರೂಪಾಯಿಯೂ ಅವರಿಗೆ ಅಮೂಲ್ಯವಾದ್ದದ್ದು. ಹಣ ಕಡಿತದ ಹೊರತಾಗಿಯೂ ಬ್ಯಾಂಕ್‌ಗಳು ಮಾಹಿತಿ ನೀಡದೆ ವಿಮಾ ಯೋಜನೆಗೆ ನೋಂದಣಿ ಮಾಡುವುದು ದೊಡ್ಡ ವಂಚನೆ.

ಕೃಪೆ : artical-14.com

ಇದನ್ನೂ ಓದಿ : ಬ್ಲೂಮ್‌ಬರ್ಗ್ ವರದಿಗೆ ತಡೆ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೆಟ್ಟು ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...