Homeಮುಖಪುಟಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

- Advertisement -
- Advertisement -

ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್‌ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ.

2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು, 2,36,265 ಕೋಟಿ ರೂಪಾಯಿ ಸಾಲ ರೈಟ್ ಆಫ್ ಮಾಡಲಾಗಿದೆ. 2014-15ರ ಹಣಕಾಸು ವರ್ಷದಲ್ಲಿ ಅತಿ ಕಡಿಮೆ, 58,786 ಕೋಟಿ ರೂ. ರೈಟ್ ಆಫ್ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 1,70,270 ಕೋಟಿ ರೂ. ವಸೂಲಾಗದ ಸಾಲ ರೈಟ್ ಆಫ್ ಮಾಡಿವೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ರೈಟ್ ಆಫ್ ಮಾಡಿದ 2,16,324 ಕೋಟಿ ರೂ.ಗೆ ಹೋಲಿಸಿದರೆ ಕಡಿಮೆಯಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಮಾರ್ಗಸೂಚಿ ಹಾಗೂ ಆಡಳಿತ ಮಂಡಳಿ ಒಪ್ಪಿದ ನೀತಿಗೆ ಅನುಗುಣವಾಗಿ ಬ್ಯಾಂಕ್‌ಗಳು ತಾವು ನೀಡಿದ ಸಾಲವು ವಸೂಲಾಗದ ಸಾಲ ಎಂದು ವರ್ಗೀಕರಣ ಆದ ನಾಲ್ಕು ವರ್ಷಗಳ ನಂತರ, ಆ ಸಾಲವನ್ನು ರೈಟ್‌ ಆಫ್ ಮಾಡುತ್ತವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

ರೈಟ್‌ ಆಫ್‌ ಅಂದರೆ ಸಾಲ ಪಡೆದವನ ಹೊಣೆಗಾರಿಕೇಯೇನೂ ಕಡಿಮೆಯಾಗುವುದಿಲ್ಲ. ಆತನಿಗೆ ಇದರಿಂದ ಲಾಭವೇನೂ ಆಗುವುದಿಲ್ಲ. ಬ್ಯಾಂಕ್‌ಗಳು ಸಾಲ ವಸೂಲಾತಿ ಪ್ರಕ್ರಿಯೆಯನ್ನು ವಿವಿಧ ಮಾರ್ಗಗಳ ಮೂಲಕ ಮುಂದುವರಿಸುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್‌ಗಳು ಸಿವಿಲ್ ನ್ಯಾಯಾಲಯಗಳು ಅಥವಾ ಸಾಲ ವಸೂಲಾತಿ ನ್ಯಾಯಮಂಡಳಿಗಳಲ್ಲಿ ಮೊಕದ್ದಮೆ ಹೂಡುವುದು, ಹಣಕಾಸು ಆಸ್ತಿಗಳ ಭದ್ರತೆ, ಪುನರ್ನಿರ್ಮಾಣ ಮತ್ತು ಭದ್ರತಾ ಬಡ್ಡಿ ಕಾಯ್ದೆಯನ್ನು ಜಾರಿಗೊಳಿಸುವುದು, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಅಡಿಯಲ್ಲಿ ಕ್ರಮ ಕೈಗೊಳ್ಳುವಂತಹ ವಿವಿಧ ಕಾರ್ಯವಿಧಾನಗಳ ಮೂಲಕ ವಸೂಲಾತಿ ಪ್ರಯತ್ನಗಳನ್ನು ಮುಂದುವರಿಯಲಿವೆ ಎಂದಿದ್ದಾರೆ.

ಡಿಸೆಂಬರ್ 31, 2024 ರ ಹೊತ್ತಿಗೆ ನಿಗದಿತ ವಾಣಿಜ್ಯ ಬ್ಯಾಂಕ್‌ಗಳು 29 ವಿಶಿಷ್ಟ ಸಾಲಗಾರ ಕಂಪನಿಗಳನ್ನು ಎನ್‌ಪಿಎಗಳಾಗಿ ವರ್ಗೀಕರಿಸಿದ್ದು, ಪ್ರತಿಯೊಂದೂ ರೂ. 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಬಾಕಿ ಸಾಲಗಳನ್ನು ಹೊಂದಿದ್ದು, ಒಟ್ಟಾರೆಯಾಗಿ ರೂ. 61,027 ಕೋಟಿಗಳಷ್ಟಿದೆ ಎಂದು ತಿಳಿಸಿದ್ದಾರೆ.

ಬಾಕಿ ವಸೂಲಾತಿಗಾಗಿ ಬ್ಯಾಂಕ್‌ಗಳು ಸಾಲಗಾರರಿಗೆ ಕರೆ ಮಾಡುವುದು, ಇಮೇಲ್ ಮಾಡುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ಡೀಫಾಲ್ಟ್ ಮೊತ್ತವನ್ನು ಅವಲಂಬಿಸಿ ಬ್ಯಾಂಕ್‌ಗಳು ಕಾರ್ಪೊರೇಟ್ ಸಾಲಗಾರರಿಗಾಗಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೂಲಕ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು ಎಂದು ಹೇಳಿದ್ದಾರೆ.

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...