Homeಮುಖಪುಟಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

- Advertisement -
- Advertisement -

ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್‌ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ.

2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು, 2,36,265 ಕೋಟಿ ರೂಪಾಯಿ ಸಾಲ ರೈಟ್ ಆಫ್ ಮಾಡಲಾಗಿದೆ. 2014-15ರ ಹಣಕಾಸು ವರ್ಷದಲ್ಲಿ ಅತಿ ಕಡಿಮೆ, 58,786 ಕೋಟಿ ರೂ. ರೈಟ್ ಆಫ್ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 1,70,270 ಕೋಟಿ ರೂ. ವಸೂಲಾಗದ ಸಾಲ ರೈಟ್ ಆಫ್ ಮಾಡಿವೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ರೈಟ್ ಆಫ್ ಮಾಡಿದ 2,16,324 ಕೋಟಿ ರೂ.ಗೆ ಹೋಲಿಸಿದರೆ ಕಡಿಮೆಯಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಮಾರ್ಗಸೂಚಿ ಹಾಗೂ ಆಡಳಿತ ಮಂಡಳಿ ಒಪ್ಪಿದ ನೀತಿಗೆ ಅನುಗುಣವಾಗಿ ಬ್ಯಾಂಕ್‌ಗಳು ತಾವು ನೀಡಿದ ಸಾಲವು ವಸೂಲಾಗದ ಸಾಲ ಎಂದು ವರ್ಗೀಕರಣ ಆದ ನಾಲ್ಕು ವರ್ಷಗಳ ನಂತರ, ಆ ಸಾಲವನ್ನು ರೈಟ್‌ ಆಫ್ ಮಾಡುತ್ತವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

ರೈಟ್‌ ಆಫ್‌ ಅಂದರೆ ಸಾಲ ಪಡೆದವನ ಹೊಣೆಗಾರಿಕೇಯೇನೂ ಕಡಿಮೆಯಾಗುವುದಿಲ್ಲ. ಆತನಿಗೆ ಇದರಿಂದ ಲಾಭವೇನೂ ಆಗುವುದಿಲ್ಲ. ಬ್ಯಾಂಕ್‌ಗಳು ಸಾಲ ವಸೂಲಾತಿ ಪ್ರಕ್ರಿಯೆಯನ್ನು ವಿವಿಧ ಮಾರ್ಗಗಳ ಮೂಲಕ ಮುಂದುವರಿಸುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್‌ಗಳು ಸಿವಿಲ್ ನ್ಯಾಯಾಲಯಗಳು ಅಥವಾ ಸಾಲ ವಸೂಲಾತಿ ನ್ಯಾಯಮಂಡಳಿಗಳಲ್ಲಿ ಮೊಕದ್ದಮೆ ಹೂಡುವುದು, ಹಣಕಾಸು ಆಸ್ತಿಗಳ ಭದ್ರತೆ, ಪುನರ್ನಿರ್ಮಾಣ ಮತ್ತು ಭದ್ರತಾ ಬಡ್ಡಿ ಕಾಯ್ದೆಯನ್ನು ಜಾರಿಗೊಳಿಸುವುದು, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಅಡಿಯಲ್ಲಿ ಕ್ರಮ ಕೈಗೊಳ್ಳುವಂತಹ ವಿವಿಧ ಕಾರ್ಯವಿಧಾನಗಳ ಮೂಲಕ ವಸೂಲಾತಿ ಪ್ರಯತ್ನಗಳನ್ನು ಮುಂದುವರಿಯಲಿವೆ ಎಂದಿದ್ದಾರೆ.

ಡಿಸೆಂಬರ್ 31, 2024 ರ ಹೊತ್ತಿಗೆ ನಿಗದಿತ ವಾಣಿಜ್ಯ ಬ್ಯಾಂಕ್‌ಗಳು 29 ವಿಶಿಷ್ಟ ಸಾಲಗಾರ ಕಂಪನಿಗಳನ್ನು ಎನ್‌ಪಿಎಗಳಾಗಿ ವರ್ಗೀಕರಿಸಿದ್ದು, ಪ್ರತಿಯೊಂದೂ ರೂ. 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಬಾಕಿ ಸಾಲಗಳನ್ನು ಹೊಂದಿದ್ದು, ಒಟ್ಟಾರೆಯಾಗಿ ರೂ. 61,027 ಕೋಟಿಗಳಷ್ಟಿದೆ ಎಂದು ತಿಳಿಸಿದ್ದಾರೆ.

ಬಾಕಿ ವಸೂಲಾತಿಗಾಗಿ ಬ್ಯಾಂಕ್‌ಗಳು ಸಾಲಗಾರರಿಗೆ ಕರೆ ಮಾಡುವುದು, ಇಮೇಲ್ ಮಾಡುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ಡೀಫಾಲ್ಟ್ ಮೊತ್ತವನ್ನು ಅವಲಂಬಿಸಿ ಬ್ಯಾಂಕ್‌ಗಳು ಕಾರ್ಪೊರೇಟ್ ಸಾಲಗಾರರಿಗಾಗಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೂಲಕ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು ಎಂದು ಹೇಳಿದ್ದಾರೆ.

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...