Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...