Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...