Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...