Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ಅಂತರ್ಜಾತಿ ವಿವಾಹ, ಸೊಸೆಯ ಕುಟುಂಬದವರಿಂದ ದಲಿತ ವ್ಯಕ್ತಿ ಕೊಲೆ.

ವಧುವಿನ ಕುಟುಂಬವು ಈ ಹಿಂದೆ ವರನ ತಂದೆಯನ್ನು ಬೆದರಿಸಿ ಸೊಸೆಯನ್ನು ತಮ್ಮ ಮನೆಗೆ ವಾಪಸ್‌ ಕಳುಹಿಸಲು ಒತ್ತಾಯಿಸಿತ್ತು ಎಂದು ವರನ ಕುಟುಂಬದವರು ಆರೋಪಿಸಿದ್ದಾರೆ. ಗುಜರಾತ್‌ ನ ನರೋಲ್‌ ಬಳಿ ಅಂತರ್ಜಾತಿ ವಿವಾಹವಾದ ನಂತರ ಮೇಲ್ಜಾತಿಗೆ...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ-ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ಮುಂಬರುವ ರಾಜ್ಯ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ಬಿಹಾರದ ಜನರಲ್ಲಿ ಮನವಿ ಮಾಡಿದರು. ಬೇಗುಸರಾಯ್‌ನಲ್ಲಿ ನಡೆದ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಬಿಹಾರದ ಎನ್‌ಡಿಎ ಸರ್ಕಾರದ ಉದ್ದೇಶಗಳು...

‘ನನ್ನ ಮಾತು ಕೇಳಿದ್ದರೆ ಯಡಿಯೂರಪ್ಪ ಜೈಲಿಗೆ ಹೋಗುತ್ತಿರಲಿಲ್ಲ’: ಜಮೀರ್ ಅಹಮದ್ ಖಾನ್

ಹೊಸಪೇಟೆ: ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ, ಹಣಕಾಸು ನಿರ್ವಹಣೆ ವಿಚಾರಣೆಯಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ, ನನ್ನ ಮಾತನ್ನು ತಿರಸ್ಕರಿಸಿ, ಯಡಿಯೂರಪ್ಪನವರು ಜೈಲಿಗೆ ಹೋಗುವಂತಾಯಿತು. ನನ್ನ ಮಾತು...

ಮಸೀದಿ ಧ್ವಂಸಕ್ಕೆ ‘ಜೈಶ್ರೀರಾಮ್-ಜೈ ಬಜರಂಗಬಲಿ’ ಘೋಷಣೆ ಸಾಧನವಾಗಿ ಬಳಸಲಾಗುತ್ತಿದೆ: ಸ್ವಾಮಿ ಪ್ರಸಾದ್ ಮೌರ್ಯ

ಬಿಜೆಪಿ ಆಡಳಿತದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಈಗ ಜೈ ಶ್ರೀ...

ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಕಾಲ್ತುಳಿತ: ಆಯೋಜಕರ ಮೇಲೆ ಆರೋಪ ಹೊರಿಸಿದ ಆಂಧ್ರ ಮುಖ್ಯಮಂತ್ರಿ

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾ ಪ್ರದೇಶದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಹತ್ತು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡ ಘಟನೆಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದೇವಸ್ಥಾನವು ಖಾಸಗಿ ವ್ಯಕ್ತಿಗೆ ಸೇರಿದ್ದು,...

ದೆಹಲಿ ವಿಷಕಾರಿ ಗಾಳಿ: ಪ್ರತಿ ಏಳು ಸಾವುಗಳಲ್ಲಿ ಒಂದು ಮಾಲಿನ್ಯಕ್ಕೆ ಸಂಬಂಧಿಸಿದ್ದು

ಆರೋಗ್ಯ ಮಾಪನ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್‌ಎಂಇ) ನಡೆಸಿದ ವಿಶ್ಲೇಷಣೆಯ ಪ್ರಕಾರ, ವಾಯು ಮಾಲಿನ್ಯವು ದೆಹಲಿಗೆ ಅತ್ಯಂತ ಮಾರಕ ಆರೋಗ್ಯ ಸಮಸ್ಯೆಯಾಗಿ ಮುಂದುವರೆದಿದೆ. ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಬೊಜ್ಜುಗಿಂತ ಹೆಚ್ಚಿನ ಜೀವಗಳನ್ನು...

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ: ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ಬಿಜೆಪಿ ಸಂಸದನ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಯನ್ನು ಮಹಾಭಾರತ ಯುಗದಲ್ಲಿ ಪಾಂಡವರು ಸ್ಥಾಪಿಸಿದರು ಎಂದು ನಂಬಲಾದ ಪ್ರಾಚೀನ ನಗರದ ಹೆಸರಾದ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಕೇಂದ್ರ ಗೃಹ ಸಚಿವ...