Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...