Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...