Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...