Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....