Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...