Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...