Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...