Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...