Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...