Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...