Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...