Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...