Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....