Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...