Homeಮುಖಪುಟದೇಶದ ಕಾನೂನು ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರೆ, ನೀವು ಮಾಡುತ್ತಿರುವುದು ದೇಶದ್ರೋಹವಲ್ಲವೇ?

ದೇಶದ ಕಾನೂನು ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರೆ, ನೀವು ಮಾಡುತ್ತಿರುವುದು ದೇಶದ್ರೋಹವಲ್ಲವೇ?

ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ, ಮಲೆಂಗಾವ್‌ ಸ್ಫೋಟ ಮುಂತಾದ ಭಯೋತ್ಪಾದನಾ ಪ್ರಕರಣಗಳಲ್ಲಿಯೂ ಸಂಸದೆ ಪ್ರಗ್ಯಾ ಸಿಂಗ್‌ ಥರಹದ ಹಲವಾರು ಆರೋಪಿಗಳ ಪರವಾಗಿ ವಕೀಲರು ಇಂದಿಗೂ ವಾದ ಮಾಡುತ್ತಿದ್ದಾರೆ. 

- Advertisement -
- Advertisement -

ಇಡೀ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಾನತೆಗೆ ಮಾದರಿ ರಾಷ್ಟ್ರವೂ ಹೌದು. “ಕಾನೂನಿನ ಕೈಯಿಂದ ನೂರು ಅಪರಾಧಿಗಳು ತಪ್ಪಿಸಿಕೊಂಡರೂ ಚಿಂತೆ ಇಲ್ಲ, ಒಬ್ಬನೇ ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು” ಎಂಬುದು ಲಿಖಿತ ಸಂವಿಧಾನ ಮತ್ತು ಬಲಿಷ್ಠ ಕಾನೂನನ್ನು ಹೊಂದಿರುವ ಗಣತಂತ್ರ ಭಾರತ ದಂಡ ಸಂಹಿತೆಯ ಏಕೈಕ ಆಶಯ. ಇದೇ ಕಾರಣಕ್ಕೆ ಇತರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಭಾರತ ಕಾನೂನು ವ್ಯವಸ್ಥೆ ಸಾಕಷ್ಟು ಉದಾರಿಯೂ ಹೌದು..! ನೇರ ನಿಷ್ಠುರವಾದಿಯೂ ಹೌದು..!

ಪ್ರಜಾಪ್ರಭುತ್ವ ಮತ್ತು ಸಂವಿಧಾನ ದೇಶದ ಒಂದು ಕಣ್ಣಾದರೆ, ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತೀಯ ದಂಡ ಸಂಹಿತೆ ಈ ದೇಶದ ಮತ್ತೊಂದು ಕಣ್ಣು. ಇದೇ ಕಾರಣಕ್ಕೆ ಇಡೀ ದೇಶದ ಶಾಸಕಾಂಗ ಮತ್ತು ಕಾರ್ಯಾಂಗ ಅವ್ಯವಹಾರದಲ್ಲಿ ನಲುಗಿ ಜನರಿಂದ ಛೀಮಾರಿ ಹಾಕಿಸಿಕೊಂಡರೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ಮಾತ್ರ ಈಗಲೂ ಜನ ಅಚಲವಾದ ನಂಬಿಕೆ ಇಟ್ಟಿದ್ದಾರೆ.

ಆದರೆ, ಇತ್ತೀಚಿನ ಬೆಳವಣಿಗಗಳ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ನ್ಯಾಯಾಂಗ ವ್ಯವಸ್ಥೆಯ ಮರ್ಯಾದೆ ಮತ್ತು ಘನತೆಯನ್ನು ಕಳೆಯುವ ಕೆಲಸ ಅಥವಾ ಪಿತೂರಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ಎಂದೆನಿಸದೆ ಇರದು.
ಏಕೆಂದರೆ ಒಂದೆಡೆ ಯಾವುದೇ ಅಪರಾಧ ಘಟನೆ ನಡೆದರೂ ಸಹ ಆ ಅಪರಾಧ ಘಟನೆಯಲ್ಲಿ ಭಾಗಿಯಾದ ವ್ಯಕ್ತಿ ಅಪರಾಧಿ ಹೌದೋ? ಇಲ್ಲವೋ? ಎಂದು ತೀರ್ಮಾನಿಸುವ ಕೆಲಸ ನ್ಯಾಯಾಲಯದ್ದು. ಆ ತೀರ್ಮಾನ ಆಗುವವರೆಗೆ ಆತ ಆರೋಪಿ ಹೌದೇ ಹೊರತು ಅಪರಾಧಿ ಅಲ್ಲ. ಆದರೆ, ಪ್ರಸ್ತುತ ಈ ದೇಶದಲ್ಲಿ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಮಾಧ್ಯಮಗಳು ಹಾಗೂ ವಕೀಲರು ಇಂತಹ ತೀರ್ಪು ಕೊಡುತ್ತಿರುವುದನ್ನು ನ್ಯಾಯಾಂಗ ನಿಂದನೆ ಅಥವಾ ನ್ಯಾಯಾಲಯ ವ್ಯವಸ್ಥೆ ಮೇಲಿನ ಹಸ್ತಕ್ಷೇಪ ಎನ್ನದೆ ವಿಧಿಯಿಲ್ಲ.

ಈ ಮೇಲಿನ ವಿಶ್ಲೇಷಣೆ ಅಥವಾ ಆರೋಪಕ್ಕೆ ನಮ್ಮದೇ ರಾಜ್ಯದಲ್ಲಿ ಸಾಲು ಸಾಲು ಉದಾಹರಣೆ ಸಿಗುತ್ತವೆ. ಮೈಸೂರಿನಲ್ಲಿ Fress Kashmir ಪೋಸ್ಟರ್ ಹಿಡಿದು ಹೋರಾಟ ನಡೆಸಿದ್ದ ಪತ್ರಿಕೋದ್ಯಮ ವಿದ್ಯಾರ್ಥಿನಿ ನಳಿನಿ ಬಾಲಕೃಷ್ಣನ್, ಹುಬ್ಬಳ್ಳಿಯಲ್ಲಿ Pakisthan Zindabad ಎಂದು ಘೋಷಣೆ ಕೂಗಿದ್ದ ಮೂವರು ಇಂಜಿನಿಯರ್ ವಿದ್ಯಾರ್ಥಿಗಳು, CAA ವಿರೋಧಿ ವೇದಿಕೆಯಲ್ಲಿ Pakisthan Zindabad ಎಂದು ಘೋಷಣೆ ಕೂಗಿದ್ದ ಅಮೂಲ್ಯಾ ಲಿಯೋನ್ ಹಾಗೂ ಹಿಂದೂಪರ ಸಂಘಟನೆಗಳ ಪ್ರತಿಭಟನೆ ವೇಳೆ Kashmir-CAA-NRC-Transgender Free Free ಎಂದು ಪೋಸ್ಟರ್ ಹಿಡಿದಿದ್ದ ಆರುದ್ರಾ ಹೀಗೆ ಸಾಲು ಸಾಲು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ.

ವಿಪರ್ಯಾಸ ಎಂದರೆ ನಳಿನಿ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಇಂದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪರಾಧಿಗಳು ಎಂದು ಸಾಬೀತುಪಡಿಸಬೇಕಾಗಿರುವ ವಕೀಲರು ಇವರ ಪ್ರಕರಣವನ್ನು ಯಾರೂ ವಾದಿಸಲು ಮುಂದೆ ಬರಬಾರದು ಎಂದು ಫರ್ಮಾನು ಹೊರಡಿಸಿದೆ. ಈ ಮೂಲಕ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಇವರೆಲ್ಲರೂ ಅಪರಾಧಿಗಳು ಎಂದು ತೀರ್ಪು ನೀಡಿಬಿಟ್ಟಿದೆ.

ಅಸಲಿಗೆ ನಳಿನಿ, ಅಮೂಲ್ಯ, ಆರಿದ್ರಾ ಮತ್ತು ಹುಬ್ಬಳಿಯಲ್ಲಿ pakisthan Zindabad ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು ನಿರಪರಾಧಿಗಳು ಎಂದು ಇಲ್ಲಿ ಯಾರೂ ಹೇಳುತ್ತಿಲ್ಲ. ಈ ದೇಶದ ನ್ಯಾಯಾಂಗ ವ್ಯವಸ್ಥೆಗೆ ಒಂದು ಘನತೆ ಇದೆ, ಗೌರವ ಇದೆ. ಅದನ್ನು ಕಾನೂನು ಬಾಹೀರ ಚಟುವಟಿಕೆಗಳಿಂದ ಕಳೆಯಬೇಡಿ ಎಂಬುದಷ್ಟೇ ನಮ್ಮ ಆಶಯ (ವಿ.ಸೂ:-ಓರ್ವ ವ್ಯಕ್ತಿಯ ಪರ ವಕಾಲತ್ತು ವಹಿಸಬಾರದು ಎಂದು ತಾಕೀತು ಮಾಡುವುದು ಸಹ ಕಾನೂನು ಬಾಹೀರ)

ಅಫ್ಜಲ್ ಗುರು-ಕಸಬ್‌ನಿಂದ, ಆಸೀಫಾ-ನಿರ್ಭಯಾ ಅತ್ಯಾಚಾರಿಗಳವರೆಗೆ

2001ರಲ್ಲಿ ದೇಶದ ಹೃದಯ ಎಂದೇ ಭಾವಿಸಲಾಗುವ ಸಂಸತ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಕೂದಲೆಳೆಯ ಅಂತರದಲ್ಲಿ ನಮ್ಮ ಸಂಸದರು ಈ ದಾಳಿಯಿಂದ ಪಾರಾಗಿದ್ದರು. ಕಾಶ್ಮೀರ ಮೂಲದ ಅಫ್ಜಲ್ ಗುರು ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಿ ಆತನನ್ನು ಬಂಧಿಸಲಾಗಿತ್ತು.
ಆದರೆ, ಈ ದೇಶದ ಕಾನೂನು ವ್ಯವಸ್ಥೆ ಆತನನ್ನು ಗುಂಡಿಟ್ಟು ಕೊಲ್ಲಲಿಲ್ಲ. ಬದಲಾಗಿ ಆತನಿಗೆ ನ್ಯಾಯಾಲಯದ ಎದುರು ವಾದ ಮಂಡಿಸಲು ಒಂದು ಅವಕಾಶ ಕಲ್ಪಿಸಿಕೊಡಲಾಗಿತ್ತು ಮತ್ತು ಆತನಿಗಾಗಿಯೂ ವಕೀಲರನ್ನು ಸರ್ಕಾರವೇ ನೇಮಿಸಿತ್ತು.

ತಾಜ್‌ ಹೋಟೆಲ್‌ ಮೇಲೆ ದಾಳಿ

2008ರಲ್ಲಿ ಇಡೀ ಮುಂಬೈ ನಗರವನ್ನೇ ಬೆಚ್ಚಿ ಬೀಳಿಸಿದ್ದ ಘಟನೆ ಅದು. ದೋಣಿಯ ಮೂಲಕ ಗಡಿ ಉಲ್ಲಂಘಿಸಿ ಭಾರತ ಪ್ರವೇಶಿಸಿದ್ದ ಉಗ್ರರು ಮುಂಬೈನ ಪ್ರಸಿದ್ಧ ತಾಜ್ ಹೋಟಲ್‌ಗೆ ನುಗ್ಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ಬಲಿಯಾಗಿದ್ದರೆ, ಹೇಮಂತ್ ಕರ್ಕರೆ, ವಿಜಯ್ ಸಾಲಾಸ್ಕರ್, ಅಶೋಕ್ ಕಾಮ್ಟೆ ಯಂತಹ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದರು.

ಕೊನೆಗೂ ಹರಸಾಹಸಪಟ್ಟ ಭಾರತೀಯ ಸೇನೆ ಉಗ್ರರನ್ನು ಸದೆಬಡಿಯುವಲ್ಲಿ ಸಫಲವಾಗಿತ್ತು. ಅಲ್ಲದೆ, ಅಜ್ಮಲ್ ಕಸಬ್ ಎನ್ನುವ ಓರ್ವ ಪಾಕಿಸ್ತಾನಿ ಉಗ್ರನನ್ನು ಜೀವಂತ ಸೆರೆಹಿಡಿಯುವಲ್ಲಿ ಸಫಲವಾಗಿತ್ತು. ಆದರೂ, ಆತನಿಗೆ ನ್ಯಾಯಾಂಗದ ಎದುರು ವಾದ ಮಂಡಿಸಲು ಅವಕಾಶ ನೀಡಲಾಗಿತ್ತು, ಓರ್ವ ಸರ್ಕಾರಿ ನ್ಯಾಯವಾದಿಯನ್ನೂ ಅದಕ್ಕೆಂದು ನೇಮಿಸಲಾಗಿತ್ತು. ಆದು ಅಪರಾಧಿ ಎಂದು ನ್ಯಾಯಾಲಯ ಮರಣ ದಂಡನೆ ವಿಧಿಸಿತು.

ನಿರ್ಭಯಾ ಅತ್ಯಾಚಾರ

2012 ಡಿಸೆಂಬರ್ 12ರ ರಾತ್ರಿ. ದೆಹಲಿಯಲ್ಲಿ ನಡೆದ ಆ ಒಂದು ರಣ ಭಯಂಕರ ಘಟನೆ ಭಾಗಶಃ ಭಾರತ ಇಡೀ ವಿಶ್ವದ ಎದುರು ತಲೆ ತಗ್ಗಿಸುವಂತೆ ಮಾಡಿತ್ತು. ಚಲಿಸುವ ಬಸ್ಸಿನಲ್ಲಿ ಓರ್ವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿ ರಸ್ತೆಯಲ್ಲೇ ಆಕೆಯ ದೇಹವನ್ನು ಎಸೆದುಹೋಗಲಾಗಿತ್ತು.

ಆ ಘಟನೆಗೆ ಭಾರತೀಯರು ತೋರಿಸಿದ ಕಿಚ್ಚಿಗೆ ಅಂದೇ ಎಲ್ಲಾ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬಹುದಿತ್ತು. ಆ ಅವಕಾಶವೂ ಪೊಲೀಸರ ಬಳಿ ಇತ್ತು. ಆದರೆ, ದೇಶದ ನ್ಯಾಯಾಂಗ ವ್ಯವಸ್ಥೆ ಅದಕ್ಕೆ ಅವಕಾಶ ನೀಡಲಿಲ್ಲ. ಬದಲಾಗಿ ಅವರ ಪರವಾಗಿಯೂ ವಾದ ಮಂಡಿಸಲು ನ್ಯಾಯವಾದಿಗಳನ್ನು ನೇಮಕ ಮಾಡಲಾಯಿತು. ಸತತ 8 ವರ್ಷಗಳ ನ್ಯಾಯಾಂಗ ತನಿಖೆ ಕೊನೆಗೂ ಮುಗಿದಿದ್ದು, ಆರೋಪಿಗಳ ಅಪರಾಧ ಸಾಬೀತಾಗಿದ್ದು, ಎಲ್ಲರಿಗೂ ಗಲ್ಲುಶಿಕ್ಷೆ ವಿಧಿಸಲಾಗಿದೆ. ಈಗಲೂ ಅವರ ಗಲ್ಲುಶಿಕ್ಷೆಯನ್ನು ತಪ್ಪಿಸಲು ನಮ್ಮದೇ ವಕೀಲರಿಂದ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಅರಗಿಸಿಕೊಳ್ಳಲು ಸಾಧ್ಯವಾಗದ ಕಟು ಸತ್ಯ.

ಕಾಮುಕರಿಗೆ ಬಲಿಯಾದ ಆಸೀಫಾ

ಭಾಗಶಃ ಆಸೀಫಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಜಗತ್ತು ಎಂದಿಗೂ ಭಾರತವನ್ನು ಕ್ಷಮಿಸದೇನೋ? ಕಾಶ್ಮೀರದ ಕತುವಾ ಎಂಬಲ್ಲಿ ಪಾಪ ಕುದುರೆ ಮೇಯಿಸಲು ಮನೆಯಿಂದ ಆಚೆ ಹೋದ 8 ವರ್ಷ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಪೊಲೀಸ್ ಪ್ರಕರಣ ದಾಖಲಿಸಿ ಹುಡುಕಿದರೂ ಆಕೆ ಸಿಕ್ಕಿರಲಿಲ್ಲ. ಆದರೆ, ಆಕೆ ಸಿಕ್ಕಾಗ ಜೀವ ಇರಲಿಲ್ಲ.

ಆಕೆ ಮುಸ್ಲಿಂ ಹುಡುಗಿ ಎಂಬ ಏಕೈಕ ಕಾರಣಕ್ಕೆ 6 ಜನ ಆಕೆಯನ್ನು ಒಂದು ವಾರಗಳ ಕಾಲ ದೇವಾಸ್ಥಾನವೊಂದರಲ್ಲಿ ಕೂಡಿ ಹಾಕಿ ಸತತವಾಗಿ ಅತ್ಯಾಚಾರವೆಸಗಿ ಕೊಲೆಗೈದಿದ್ದರು. ಹೀಗೆ ಅತ್ಯಾಚಾರ ಎಸಗಿದವರ ಪೈಕಿ 15 ವರ್ಷದ ಬಾಲಕನೂ ಪ್ರಮುಖ ಆರೋಪಿ. ಈ ಪ್ರಕರಣದ ವಿರುದ್ಧ ಇಡೀ ದೇಶ ಸಿಡಿದೆದ್ದಿತ್ತು. ಪರಿಣಾಮ ಎಲ್ಲಾ ಆರೋಪಿಗಳ ಬಂಧನವಾಯಿತು. ಆದರೆ, ನೆನಪಿರಲಿ ಈ ಪ್ರಕರಣದಲ್ಲೂ ಸಹ ಇವರ ಪರ ವಾದ ಮಂಡಿಸಲು ನ್ಯಾಯವಾದಿ ಇದ್ದಾರೆ.

ಈ ನಾಲ್ಕು ಪ್ರಕರಣಗಳು ಕೇವಲ ಉದಾಹರಣೆಗಳಷ್ಟೇ. ದೇಶದಲ್ಲಿ ಪ್ರತಿನಿತ್ಯ ಇಂತಹ ನೂರಾರು ಘಟನೆಗಳು ಸಂಭವಿಸುತ್ತಲೇ ಇರುತ್ತವೆ, ಅತ್ಯಾಚಾರ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಗಳಾಗಿವೆ ಬಿಡಿ. ಬಿಜೆಪಿಯ ಕುಲದೀಪ್‌ ಸಿಂಗ್‌ ಸೆಂಗಾರ್‌, ಚಿನ್ಮಯಾನಂದ್‌ನಂತಹ ಹಲವಾರು ರಾಜಕಾರಣಿಗಳು ಅತ್ಯಾಚಾರ, ಕೊಲೆಯಂತಹ ಘೋರ ಆರೋಪಗಳನ್ನು ಎದರಿಸುತ್ತಿದ್ದಾರೆ. ರಾಜಕಾರಣಿಗಳಲ್ಲಿ ಸುಮಾರು ಅರ್ಧದಷ್ಟು ಜನ ಗಂಭೀರ ಪ್ರಕರಣಗಳ ಆರೋಪ ಹೊತ್ತಿದ್ದಾರೆ. ಆದರೆ, ಅವರ ಪರ ವಾದ ಮಂಡಿಸಲು ವಕೀಲರು ಮಾತ್ರ ನಾ ಮುಂದು ತಾ ಮುಂದು ಎಂದು ಮುಂದೆ ಬರುತ್ತಲೇ ಇರುತ್ತಾರೆ.

ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ, ಮಲೆಂಗಾವ್‌ ಸ್ಫೋಟ ಮುಂತಾದ ಭಯೋತ್ಪಾದನಾ ಪ್ರಕರಣಗಳಲ್ಲಿಯೂ ಸಂಸದೆ ಪ್ರಗ್ಯಾ ಸಿಂಗ್‌ ಥರಹದ ಹಲವಾರು ಆರೋಪಿಗಳ ಪರವಾಗಿ ವಕೀಲರು ಇಂದಿಗೂ ವಾದ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಯಾವ ವಕೀಲರ ಸಂಘಟನೆಯೂ ಈ ಪ್ರಕರಣವನ್ನು ಯಾರೂ ವಾದಿಸಬಾರದು ಎಂದು ಘೋಷಣೆ ಕೂಗುವುದಿಲ್ಲ, ಕರಪತ್ರ ಹಂಚುವುದಿಲ್ಲ. ಆದರೆ, ಇತ್ತೀಚೆಗೆ ಈ ಪ್ರವೃತ್ತಿ ಹೆಚ್ಚಾಗಿದೆ. ಅತ್ಯಾಚಾರ, ಕೊಲೆ ಮತ್ತು ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದವರ ಮೇಲೆ ಪ್ರೀತಿ ತೋರಿಸಿದ ವಕೀಲರು ಇಂದು ನಳಿನಿ, ಅಮೂಲ್ಯ, ಆರಿದ್ರಾ ಎಂಬ ಎಳಸುಗಳ ವಿರುದ್ಧ ಬ್ರಹ್ಮಾಸ್ತ್ರ ಹೂಡುತ್ತಿರುವುದು ಏಕೆ? ಅಸಲಿಗೆ ಇದು ನ್ಯಾಯಾಂಗ ನಿಂಧನೆಯಲ್ಲವೇ? ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುವುದು ನಿಜವಾದ ದೇಶದ್ರೋಹವಲ್ಲವೇ? ಈ ಪ್ರಶ್ನೆಗೆಲ್ಲಾ ಉತ್ತರಿಸುವವರು ಯಾರು……..?

(ಲೇಖಕರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...