Homeಮುಖಪುಟದೇಶದ ಕಾನೂನು ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರೆ, ನೀವು ಮಾಡುತ್ತಿರುವುದು ದೇಶದ್ರೋಹವಲ್ಲವೇ?

ದೇಶದ ಕಾನೂನು ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರೆ, ನೀವು ಮಾಡುತ್ತಿರುವುದು ದೇಶದ್ರೋಹವಲ್ಲವೇ?

ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ, ಮಲೆಂಗಾವ್‌ ಸ್ಫೋಟ ಮುಂತಾದ ಭಯೋತ್ಪಾದನಾ ಪ್ರಕರಣಗಳಲ್ಲಿಯೂ ಸಂಸದೆ ಪ್ರಗ್ಯಾ ಸಿಂಗ್‌ ಥರಹದ ಹಲವಾರು ಆರೋಪಿಗಳ ಪರವಾಗಿ ವಕೀಲರು ಇಂದಿಗೂ ವಾದ ಮಾಡುತ್ತಿದ್ದಾರೆ. 

- Advertisement -
- Advertisement -

ಇಡೀ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಾನತೆಗೆ ಮಾದರಿ ರಾಷ್ಟ್ರವೂ ಹೌದು. “ಕಾನೂನಿನ ಕೈಯಿಂದ ನೂರು ಅಪರಾಧಿಗಳು ತಪ್ಪಿಸಿಕೊಂಡರೂ ಚಿಂತೆ ಇಲ್ಲ, ಒಬ್ಬನೇ ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು” ಎಂಬುದು ಲಿಖಿತ ಸಂವಿಧಾನ ಮತ್ತು ಬಲಿಷ್ಠ ಕಾನೂನನ್ನು ಹೊಂದಿರುವ ಗಣತಂತ್ರ ಭಾರತ ದಂಡ ಸಂಹಿತೆಯ ಏಕೈಕ ಆಶಯ. ಇದೇ ಕಾರಣಕ್ಕೆ ಇತರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಭಾರತ ಕಾನೂನು ವ್ಯವಸ್ಥೆ ಸಾಕಷ್ಟು ಉದಾರಿಯೂ ಹೌದು..! ನೇರ ನಿಷ್ಠುರವಾದಿಯೂ ಹೌದು..!

ಪ್ರಜಾಪ್ರಭುತ್ವ ಮತ್ತು ಸಂವಿಧಾನ ದೇಶದ ಒಂದು ಕಣ್ಣಾದರೆ, ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತೀಯ ದಂಡ ಸಂಹಿತೆ ಈ ದೇಶದ ಮತ್ತೊಂದು ಕಣ್ಣು. ಇದೇ ಕಾರಣಕ್ಕೆ ಇಡೀ ದೇಶದ ಶಾಸಕಾಂಗ ಮತ್ತು ಕಾರ್ಯಾಂಗ ಅವ್ಯವಹಾರದಲ್ಲಿ ನಲುಗಿ ಜನರಿಂದ ಛೀಮಾರಿ ಹಾಕಿಸಿಕೊಂಡರೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ಮಾತ್ರ ಈಗಲೂ ಜನ ಅಚಲವಾದ ನಂಬಿಕೆ ಇಟ್ಟಿದ್ದಾರೆ.

ಆದರೆ, ಇತ್ತೀಚಿನ ಬೆಳವಣಿಗಗಳ ಕಡೆಗೆ ಒಮ್ಮೆ ಕಣ್ಣಾಯಿಸಿದರೆ ನ್ಯಾಯಾಂಗ ವ್ಯವಸ್ಥೆಯ ಮರ್ಯಾದೆ ಮತ್ತು ಘನತೆಯನ್ನು ಕಳೆಯುವ ಕೆಲಸ ಅಥವಾ ಪಿತೂರಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ಎಂದೆನಿಸದೆ ಇರದು.
ಏಕೆಂದರೆ ಒಂದೆಡೆ ಯಾವುದೇ ಅಪರಾಧ ಘಟನೆ ನಡೆದರೂ ಸಹ ಆ ಅಪರಾಧ ಘಟನೆಯಲ್ಲಿ ಭಾಗಿಯಾದ ವ್ಯಕ್ತಿ ಅಪರಾಧಿ ಹೌದೋ? ಇಲ್ಲವೋ? ಎಂದು ತೀರ್ಮಾನಿಸುವ ಕೆಲಸ ನ್ಯಾಯಾಲಯದ್ದು. ಆ ತೀರ್ಮಾನ ಆಗುವವರೆಗೆ ಆತ ಆರೋಪಿ ಹೌದೇ ಹೊರತು ಅಪರಾಧಿ ಅಲ್ಲ. ಆದರೆ, ಪ್ರಸ್ತುತ ಈ ದೇಶದಲ್ಲಿ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಮಾಧ್ಯಮಗಳು ಹಾಗೂ ವಕೀಲರು ಇಂತಹ ತೀರ್ಪು ಕೊಡುತ್ತಿರುವುದನ್ನು ನ್ಯಾಯಾಂಗ ನಿಂದನೆ ಅಥವಾ ನ್ಯಾಯಾಲಯ ವ್ಯವಸ್ಥೆ ಮೇಲಿನ ಹಸ್ತಕ್ಷೇಪ ಎನ್ನದೆ ವಿಧಿಯಿಲ್ಲ.

ಈ ಮೇಲಿನ ವಿಶ್ಲೇಷಣೆ ಅಥವಾ ಆರೋಪಕ್ಕೆ ನಮ್ಮದೇ ರಾಜ್ಯದಲ್ಲಿ ಸಾಲು ಸಾಲು ಉದಾಹರಣೆ ಸಿಗುತ್ತವೆ. ಮೈಸೂರಿನಲ್ಲಿ Fress Kashmir ಪೋಸ್ಟರ್ ಹಿಡಿದು ಹೋರಾಟ ನಡೆಸಿದ್ದ ಪತ್ರಿಕೋದ್ಯಮ ವಿದ್ಯಾರ್ಥಿನಿ ನಳಿನಿ ಬಾಲಕೃಷ್ಣನ್, ಹುಬ್ಬಳ್ಳಿಯಲ್ಲಿ Pakisthan Zindabad ಎಂದು ಘೋಷಣೆ ಕೂಗಿದ್ದ ಮೂವರು ಇಂಜಿನಿಯರ್ ವಿದ್ಯಾರ್ಥಿಗಳು, CAA ವಿರೋಧಿ ವೇದಿಕೆಯಲ್ಲಿ Pakisthan Zindabad ಎಂದು ಘೋಷಣೆ ಕೂಗಿದ್ದ ಅಮೂಲ್ಯಾ ಲಿಯೋನ್ ಹಾಗೂ ಹಿಂದೂಪರ ಸಂಘಟನೆಗಳ ಪ್ರತಿಭಟನೆ ವೇಳೆ Kashmir-CAA-NRC-Transgender Free Free ಎಂದು ಪೋಸ್ಟರ್ ಹಿಡಿದಿದ್ದ ಆರುದ್ರಾ ಹೀಗೆ ಸಾಲು ಸಾಲು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ.

ವಿಪರ್ಯಾಸ ಎಂದರೆ ನಳಿನಿ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಇಂದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪರಾಧಿಗಳು ಎಂದು ಸಾಬೀತುಪಡಿಸಬೇಕಾಗಿರುವ ವಕೀಲರು ಇವರ ಪ್ರಕರಣವನ್ನು ಯಾರೂ ವಾದಿಸಲು ಮುಂದೆ ಬರಬಾರದು ಎಂದು ಫರ್ಮಾನು ಹೊರಡಿಸಿದೆ. ಈ ಮೂಲಕ ನ್ಯಾಯಾಧೀಶರಿಗಿಂತ ಮುಂಚಿತವಾಗಿಯೇ ಇವರೆಲ್ಲರೂ ಅಪರಾಧಿಗಳು ಎಂದು ತೀರ್ಪು ನೀಡಿಬಿಟ್ಟಿದೆ.

ಅಸಲಿಗೆ ನಳಿನಿ, ಅಮೂಲ್ಯ, ಆರಿದ್ರಾ ಮತ್ತು ಹುಬ್ಬಳಿಯಲ್ಲಿ pakisthan Zindabad ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು ನಿರಪರಾಧಿಗಳು ಎಂದು ಇಲ್ಲಿ ಯಾರೂ ಹೇಳುತ್ತಿಲ್ಲ. ಈ ದೇಶದ ನ್ಯಾಯಾಂಗ ವ್ಯವಸ್ಥೆಗೆ ಒಂದು ಘನತೆ ಇದೆ, ಗೌರವ ಇದೆ. ಅದನ್ನು ಕಾನೂನು ಬಾಹೀರ ಚಟುವಟಿಕೆಗಳಿಂದ ಕಳೆಯಬೇಡಿ ಎಂಬುದಷ್ಟೇ ನಮ್ಮ ಆಶಯ (ವಿ.ಸೂ:-ಓರ್ವ ವ್ಯಕ್ತಿಯ ಪರ ವಕಾಲತ್ತು ವಹಿಸಬಾರದು ಎಂದು ತಾಕೀತು ಮಾಡುವುದು ಸಹ ಕಾನೂನು ಬಾಹೀರ)

ಅಫ್ಜಲ್ ಗುರು-ಕಸಬ್‌ನಿಂದ, ಆಸೀಫಾ-ನಿರ್ಭಯಾ ಅತ್ಯಾಚಾರಿಗಳವರೆಗೆ

2001ರಲ್ಲಿ ದೇಶದ ಹೃದಯ ಎಂದೇ ಭಾವಿಸಲಾಗುವ ಸಂಸತ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಕೂದಲೆಳೆಯ ಅಂತರದಲ್ಲಿ ನಮ್ಮ ಸಂಸದರು ಈ ದಾಳಿಯಿಂದ ಪಾರಾಗಿದ್ದರು. ಕಾಶ್ಮೀರ ಮೂಲದ ಅಫ್ಜಲ್ ಗುರು ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಿ ಆತನನ್ನು ಬಂಧಿಸಲಾಗಿತ್ತು.
ಆದರೆ, ಈ ದೇಶದ ಕಾನೂನು ವ್ಯವಸ್ಥೆ ಆತನನ್ನು ಗುಂಡಿಟ್ಟು ಕೊಲ್ಲಲಿಲ್ಲ. ಬದಲಾಗಿ ಆತನಿಗೆ ನ್ಯಾಯಾಲಯದ ಎದುರು ವಾದ ಮಂಡಿಸಲು ಒಂದು ಅವಕಾಶ ಕಲ್ಪಿಸಿಕೊಡಲಾಗಿತ್ತು ಮತ್ತು ಆತನಿಗಾಗಿಯೂ ವಕೀಲರನ್ನು ಸರ್ಕಾರವೇ ನೇಮಿಸಿತ್ತು.

ತಾಜ್‌ ಹೋಟೆಲ್‌ ಮೇಲೆ ದಾಳಿ

2008ರಲ್ಲಿ ಇಡೀ ಮುಂಬೈ ನಗರವನ್ನೇ ಬೆಚ್ಚಿ ಬೀಳಿಸಿದ್ದ ಘಟನೆ ಅದು. ದೋಣಿಯ ಮೂಲಕ ಗಡಿ ಉಲ್ಲಂಘಿಸಿ ಭಾರತ ಪ್ರವೇಶಿಸಿದ್ದ ಉಗ್ರರು ಮುಂಬೈನ ಪ್ರಸಿದ್ಧ ತಾಜ್ ಹೋಟಲ್‌ಗೆ ನುಗ್ಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ಬಲಿಯಾಗಿದ್ದರೆ, ಹೇಮಂತ್ ಕರ್ಕರೆ, ವಿಜಯ್ ಸಾಲಾಸ್ಕರ್, ಅಶೋಕ್ ಕಾಮ್ಟೆ ಯಂತಹ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದರು.

ಕೊನೆಗೂ ಹರಸಾಹಸಪಟ್ಟ ಭಾರತೀಯ ಸೇನೆ ಉಗ್ರರನ್ನು ಸದೆಬಡಿಯುವಲ್ಲಿ ಸಫಲವಾಗಿತ್ತು. ಅಲ್ಲದೆ, ಅಜ್ಮಲ್ ಕಸಬ್ ಎನ್ನುವ ಓರ್ವ ಪಾಕಿಸ್ತಾನಿ ಉಗ್ರನನ್ನು ಜೀವಂತ ಸೆರೆಹಿಡಿಯುವಲ್ಲಿ ಸಫಲವಾಗಿತ್ತು. ಆದರೂ, ಆತನಿಗೆ ನ್ಯಾಯಾಂಗದ ಎದುರು ವಾದ ಮಂಡಿಸಲು ಅವಕಾಶ ನೀಡಲಾಗಿತ್ತು, ಓರ್ವ ಸರ್ಕಾರಿ ನ್ಯಾಯವಾದಿಯನ್ನೂ ಅದಕ್ಕೆಂದು ನೇಮಿಸಲಾಗಿತ್ತು. ಆದು ಅಪರಾಧಿ ಎಂದು ನ್ಯಾಯಾಲಯ ಮರಣ ದಂಡನೆ ವಿಧಿಸಿತು.

ನಿರ್ಭಯಾ ಅತ್ಯಾಚಾರ

2012 ಡಿಸೆಂಬರ್ 12ರ ರಾತ್ರಿ. ದೆಹಲಿಯಲ್ಲಿ ನಡೆದ ಆ ಒಂದು ರಣ ಭಯಂಕರ ಘಟನೆ ಭಾಗಶಃ ಭಾರತ ಇಡೀ ವಿಶ್ವದ ಎದುರು ತಲೆ ತಗ್ಗಿಸುವಂತೆ ಮಾಡಿತ್ತು. ಚಲಿಸುವ ಬಸ್ಸಿನಲ್ಲಿ ಓರ್ವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿ ರಸ್ತೆಯಲ್ಲೇ ಆಕೆಯ ದೇಹವನ್ನು ಎಸೆದುಹೋಗಲಾಗಿತ್ತು.

ಆ ಘಟನೆಗೆ ಭಾರತೀಯರು ತೋರಿಸಿದ ಕಿಚ್ಚಿಗೆ ಅಂದೇ ಎಲ್ಲಾ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬಹುದಿತ್ತು. ಆ ಅವಕಾಶವೂ ಪೊಲೀಸರ ಬಳಿ ಇತ್ತು. ಆದರೆ, ದೇಶದ ನ್ಯಾಯಾಂಗ ವ್ಯವಸ್ಥೆ ಅದಕ್ಕೆ ಅವಕಾಶ ನೀಡಲಿಲ್ಲ. ಬದಲಾಗಿ ಅವರ ಪರವಾಗಿಯೂ ವಾದ ಮಂಡಿಸಲು ನ್ಯಾಯವಾದಿಗಳನ್ನು ನೇಮಕ ಮಾಡಲಾಯಿತು. ಸತತ 8 ವರ್ಷಗಳ ನ್ಯಾಯಾಂಗ ತನಿಖೆ ಕೊನೆಗೂ ಮುಗಿದಿದ್ದು, ಆರೋಪಿಗಳ ಅಪರಾಧ ಸಾಬೀತಾಗಿದ್ದು, ಎಲ್ಲರಿಗೂ ಗಲ್ಲುಶಿಕ್ಷೆ ವಿಧಿಸಲಾಗಿದೆ. ಈಗಲೂ ಅವರ ಗಲ್ಲುಶಿಕ್ಷೆಯನ್ನು ತಪ್ಪಿಸಲು ನಮ್ಮದೇ ವಕೀಲರಿಂದ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಅರಗಿಸಿಕೊಳ್ಳಲು ಸಾಧ್ಯವಾಗದ ಕಟು ಸತ್ಯ.

ಕಾಮುಕರಿಗೆ ಬಲಿಯಾದ ಆಸೀಫಾ

ಭಾಗಶಃ ಆಸೀಫಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಜಗತ್ತು ಎಂದಿಗೂ ಭಾರತವನ್ನು ಕ್ಷಮಿಸದೇನೋ? ಕಾಶ್ಮೀರದ ಕತುವಾ ಎಂಬಲ್ಲಿ ಪಾಪ ಕುದುರೆ ಮೇಯಿಸಲು ಮನೆಯಿಂದ ಆಚೆ ಹೋದ 8 ವರ್ಷ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಪೊಲೀಸ್ ಪ್ರಕರಣ ದಾಖಲಿಸಿ ಹುಡುಕಿದರೂ ಆಕೆ ಸಿಕ್ಕಿರಲಿಲ್ಲ. ಆದರೆ, ಆಕೆ ಸಿಕ್ಕಾಗ ಜೀವ ಇರಲಿಲ್ಲ.

ಆಕೆ ಮುಸ್ಲಿಂ ಹುಡುಗಿ ಎಂಬ ಏಕೈಕ ಕಾರಣಕ್ಕೆ 6 ಜನ ಆಕೆಯನ್ನು ಒಂದು ವಾರಗಳ ಕಾಲ ದೇವಾಸ್ಥಾನವೊಂದರಲ್ಲಿ ಕೂಡಿ ಹಾಕಿ ಸತತವಾಗಿ ಅತ್ಯಾಚಾರವೆಸಗಿ ಕೊಲೆಗೈದಿದ್ದರು. ಹೀಗೆ ಅತ್ಯಾಚಾರ ಎಸಗಿದವರ ಪೈಕಿ 15 ವರ್ಷದ ಬಾಲಕನೂ ಪ್ರಮುಖ ಆರೋಪಿ. ಈ ಪ್ರಕರಣದ ವಿರುದ್ಧ ಇಡೀ ದೇಶ ಸಿಡಿದೆದ್ದಿತ್ತು. ಪರಿಣಾಮ ಎಲ್ಲಾ ಆರೋಪಿಗಳ ಬಂಧನವಾಯಿತು. ಆದರೆ, ನೆನಪಿರಲಿ ಈ ಪ್ರಕರಣದಲ್ಲೂ ಸಹ ಇವರ ಪರ ವಾದ ಮಂಡಿಸಲು ನ್ಯಾಯವಾದಿ ಇದ್ದಾರೆ.

ಈ ನಾಲ್ಕು ಪ್ರಕರಣಗಳು ಕೇವಲ ಉದಾಹರಣೆಗಳಷ್ಟೇ. ದೇಶದಲ್ಲಿ ಪ್ರತಿನಿತ್ಯ ಇಂತಹ ನೂರಾರು ಘಟನೆಗಳು ಸಂಭವಿಸುತ್ತಲೇ ಇರುತ್ತವೆ, ಅತ್ಯಾಚಾರ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಗಳಾಗಿವೆ ಬಿಡಿ. ಬಿಜೆಪಿಯ ಕುಲದೀಪ್‌ ಸಿಂಗ್‌ ಸೆಂಗಾರ್‌, ಚಿನ್ಮಯಾನಂದ್‌ನಂತಹ ಹಲವಾರು ರಾಜಕಾರಣಿಗಳು ಅತ್ಯಾಚಾರ, ಕೊಲೆಯಂತಹ ಘೋರ ಆರೋಪಗಳನ್ನು ಎದರಿಸುತ್ತಿದ್ದಾರೆ. ರಾಜಕಾರಣಿಗಳಲ್ಲಿ ಸುಮಾರು ಅರ್ಧದಷ್ಟು ಜನ ಗಂಭೀರ ಪ್ರಕರಣಗಳ ಆರೋಪ ಹೊತ್ತಿದ್ದಾರೆ. ಆದರೆ, ಅವರ ಪರ ವಾದ ಮಂಡಿಸಲು ವಕೀಲರು ಮಾತ್ರ ನಾ ಮುಂದು ತಾ ಮುಂದು ಎಂದು ಮುಂದೆ ಬರುತ್ತಲೇ ಇರುತ್ತಾರೆ.

ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ, ಮಲೆಂಗಾವ್‌ ಸ್ಫೋಟ ಮುಂತಾದ ಭಯೋತ್ಪಾದನಾ ಪ್ರಕರಣಗಳಲ್ಲಿಯೂ ಸಂಸದೆ ಪ್ರಗ್ಯಾ ಸಿಂಗ್‌ ಥರಹದ ಹಲವಾರು ಆರೋಪಿಗಳ ಪರವಾಗಿ ವಕೀಲರು ಇಂದಿಗೂ ವಾದ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಯಾವ ವಕೀಲರ ಸಂಘಟನೆಯೂ ಈ ಪ್ರಕರಣವನ್ನು ಯಾರೂ ವಾದಿಸಬಾರದು ಎಂದು ಘೋಷಣೆ ಕೂಗುವುದಿಲ್ಲ, ಕರಪತ್ರ ಹಂಚುವುದಿಲ್ಲ. ಆದರೆ, ಇತ್ತೀಚೆಗೆ ಈ ಪ್ರವೃತ್ತಿ ಹೆಚ್ಚಾಗಿದೆ. ಅತ್ಯಾಚಾರ, ಕೊಲೆ ಮತ್ತು ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದವರ ಮೇಲೆ ಪ್ರೀತಿ ತೋರಿಸಿದ ವಕೀಲರು ಇಂದು ನಳಿನಿ, ಅಮೂಲ್ಯ, ಆರಿದ್ರಾ ಎಂಬ ಎಳಸುಗಳ ವಿರುದ್ಧ ಬ್ರಹ್ಮಾಸ್ತ್ರ ಹೂಡುತ್ತಿರುವುದು ಏಕೆ? ಅಸಲಿಗೆ ಇದು ನ್ಯಾಯಾಂಗ ನಿಂಧನೆಯಲ್ಲವೇ? ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುವುದು ನಿಜವಾದ ದೇಶದ್ರೋಹವಲ್ಲವೇ? ಈ ಪ್ರಶ್ನೆಗೆಲ್ಲಾ ಉತ್ತರಿಸುವವರು ಯಾರು……..?

(ಲೇಖಕರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...