Homeಮುಖಪುಟಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲಾಡಳಿತವು ಇತ್ತೀಚೆಗೆ ಅಕ್ರಮ ಕಟ್ಟಡ ಎಂದು ಮಸೀದಿಯೊಂದನ್ನು ಧ್ವಂಸಗೊಳಿಸಿತ್ತು. ಈ ಕುರಿತು ‘ದಿ ವೈರ್‌’ ಆನ್‌ಲೈನ್‌ ಸುದ್ದಿ ಸಂಸ್ಥೆಯು ಸಾಕ್ಷ್ಯಚಿತ್ರವೊಂದನ್ನು ತಯಾರಿಸಿತ್ತು. ಈ ಸಾಕ್ಷ್ಯಚಿತ್ರವು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದೆ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ ಎಂದು ಆರೋಪಿಸಿ ‘ದಿ ವೈರ್‌’ ವಿರುದ್ಧ ಬಾರಾಬಂಕಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಿ ವೈರ್‌ನ ಇಬ್ಬರು ಪತ್ರಕರ್ತರಾದ ಸಿರಾಜ್ ಅಲಿ, ಮುಕುಲ್ ಎಸ್ ಚೌಹಾಣ್‌‌ ಮತ್ತು ಮೊಹಮ್ಮದ್ ನಯೀಮ್, ಮೊಹಮ್ಮದ್ ಅನೀಸ್ ಎಂದು ಗುರುತಿಸಲ್ಪಟ್ಟ ಇತರ ಇಬ್ಬರ ಹೆಸರನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.

ಆದರೆ, ಈ ಆರೋಪಗಳನ್ನು ಆಧಾರರಹಿತ ಎಂದು ‘ದಿ ವೈರ್‌’ ಹೇಳಿದೆ. “ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

ಕಳೆದ ತಿಂಗಳು, ಬಾರಾಬಂಕಿ ಜಿಲ್ಲಾಡಳಿತವು ರಾಮ್‌ಸ್ನೇಹಿ ಘಾಟ್ ತಹಸಿಲ್ ಆವರಣದೊಳಗಿದ್ದ ಮಸೀದಿಯನ್ನು ನೆಲಸಮ ಮಾಡಿತ್ತು. ಜಿಲ್ಲಾಡಳಿತ ಇದನ್ನು “ಅಕ್ರಮ ಕಟ್ಟಡ” ಎಂದು ಕರೆದಿದೆ. ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಜಿಲ್ಲಾಡಳಿತದ ಕ್ರಮವನ್ನು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಡಳಿತದ ಕ್ರಮದ ವಿರುದ್ಧ ವಕ್ಫ್‌ ಮಂಡಳಿಯು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಪ್ರಕರಣವು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ.

“ಜೂನ್ 23 ರಂದು, ಆನ್‌ಲೈನ್ ನ್ಯೂಸ್ ಪೋರ್ಟಲ್ ದಿ ವೈರ್‌, ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ರಾಮ್‌ಸ್ನೆಹಿ ಘಾಟ್ ತಹಸಿಲ್ ಬಗ್ಗೆಗಿನ ವೀಡಿಯೊ ಸಾಕ್ಷ್ಯಚಿತ್ರವನ್ನು ಹಂಚಿಕೊಂಡಿದೆ. ಸಾಕ್ಷ್ಯಚಿತ್ರದಲ್ಲಿ, ಅವರು ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ನೀಡಿದ್ದಾರೆ”ಎಂದು ಬರಾಬಂಕಿ ಜಿಲ್ಲಾಧಿಕಾರಿ ಆದರ್ಶ್ ಸಿಂಗ್ ಗುರುವಾರ ರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ದಿ ವೈರ್‌ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ, ‘ಜಿಲ್ಲಾಡಳಿತವು ಧಾರ್ಮಿಕ ಗ್ರಂಥಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆದಿದೆ’ ಎಂದು ಹೇಳುವಂತಹ ಹಲವಾರು ತಪ್ಪು ಮತ್ತು ಆಧಾರರಹಿತ ಹೇಳಿಕೆಗಳು ಒಳಗೊಂಡಿದೆ. ಇದು ಸುಳ್ಳಾಗಿದ್ದು, ಈ ರೀತಿಯ ಏನೂ ಸಂಭವಿಸಿಲ್ಲ. ಈ ರೀತಿಯ ತಪ್ಪು ಮಾಹಿತಿಯೊಂದಿಗೆ, ದಿ ವೈರ್‌ ಸಮಾಜದಲ್ಲಿ ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಹಾಗೂ ಕೋಮು ಸೌಹಾರ್ದತೆಗೆ ಭಂಗ ತರುತ್ತಿದೆ” ಎಂದು ಆದರ್ಶ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೊಹಮ್ಮದ್ ನಯೀಮ್ ಸಾಕ್ಷ್ಯಚಿತ್ರದಲ್ಲಿ, ‘ಧಾರ್ಮಿಕ ಪುಸ್ತಕಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆಯಲಾಗುತ್ತಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಅವರು ಹೇಳಿದ್ದಾರೆ.

ಬರಾಬಂಕಿಯ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥಿಸುತ್ತಿರುವ ಚಿತ್ರ (PC: Syed Farooq Ahmad)

“ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮುಂದಿನ ಕ್ರಮಗಳು ನಡೆಯುತ್ತಿವೆ ”ಎಂದು ಯಮುನಾ ಪ್ರಸಾದ್ ತಿಳಿಸಿದ್ದಾರೆ.

ದಿ ವೈರ್‌ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಪ್ರತಿಕ್ರಿಯಿಸಿ, “ಇದು ಕಳೆದ 14 ತಿಂಗಳುಗಳಲ್ಲಿ ದಿ ವೈರ್ ಅಥವಾ ಅದರ ಪತ್ರಕರ್ತರ ವಿರುದ್ಧ ಯುಪಿ ಪೊಲೀಸರು ಸಲ್ಲಿಸಿದ ನಾಲ್ಕನೇ ಎಫ್‌ಐಆರ್. ಈ ಪ್ರತಿಯೊಂದು ಪ್ರಕರಣಗಳು ಆಧಾರರಹಿತವಾಗಿವೆ. ಆದಿತ್ಯನಾಥ್ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ನಂಬುವುದಿಲ್ಲ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಹೇಳಿದ್ದಾರೆ.

“ಉತ್ತರಪ್ರದೇಶದಲ್ಲಿ ರಾಜಕಾರಣಿಗಳು ಮತ್ತು ಸಾಮಾಜ ವಿರೋಧಿಗಳು ಬಹಿರಂಗವಾಗಿ ಕೋಮು ದ್ವೇಷವನ್ನು ಹುಟ್ಟುಹಾಕಬಹುದು ಮತ್ತು ಹಿಂಸಾಚಾರವನ್ನು ಸಮರ್ಥಿಸಬಹುದಾಗಿದೆ. ಆದರೆ ಪೊಲೀಸರು ಇವುಗಳನ್ನು ಕೋಮು ಸಾಮರಸ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಬೆದರಿಕೆಯಾಗಿ ನೋಡುವುದಿಲ್ಲ. ಆದರೆ ಆಡಳಿತದ ಕಡೆಯಿಂದ ತಪ್ಪು ಎಂದು ಆರೋಪಿಸುವ ಜನರ ಹೇಳಿಕೆಗಳನ್ನು ಪತ್ರಕರ್ತರು ವರದಿ ಮಾಡಿದಾಗ ತಕ್ಷಣವೆ ಎಫ್‌ಐಆರ್‌ಗಳನ್ನು ತಕ್ಷಣ ದಾಖಲಿಸಲಾಗುತ್ತದೆ. ಈ ತಂತ್ರಗಳಿಗೆ ವೈರ್‌ ಬೆದರುವುದಿಲ್ಲ” ಎಂದು ಸಿದ್ದಾರ್ಥ್‌ ವರದರಾಜನ್‌ ಹೇಳಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತದಲ್ಲಿ ನಿಜ ಹೇಳುವುದೇ ಅಪರಾಧವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...