Homeಮುಖಪುಟಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲಾಡಳಿತವು ಇತ್ತೀಚೆಗೆ ಅಕ್ರಮ ಕಟ್ಟಡ ಎಂದು ಮಸೀದಿಯೊಂದನ್ನು ಧ್ವಂಸಗೊಳಿಸಿತ್ತು. ಈ ಕುರಿತು ‘ದಿ ವೈರ್‌’ ಆನ್‌ಲೈನ್‌ ಸುದ್ದಿ ಸಂಸ್ಥೆಯು ಸಾಕ್ಷ್ಯಚಿತ್ರವೊಂದನ್ನು ತಯಾರಿಸಿತ್ತು. ಈ ಸಾಕ್ಷ್ಯಚಿತ್ರವು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದೆ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ ಎಂದು ಆರೋಪಿಸಿ ‘ದಿ ವೈರ್‌’ ವಿರುದ್ಧ ಬಾರಾಬಂಕಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಿ ವೈರ್‌ನ ಇಬ್ಬರು ಪತ್ರಕರ್ತರಾದ ಸಿರಾಜ್ ಅಲಿ, ಮುಕುಲ್ ಎಸ್ ಚೌಹಾಣ್‌‌ ಮತ್ತು ಮೊಹಮ್ಮದ್ ನಯೀಮ್, ಮೊಹಮ್ಮದ್ ಅನೀಸ್ ಎಂದು ಗುರುತಿಸಲ್ಪಟ್ಟ ಇತರ ಇಬ್ಬರ ಹೆಸರನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.

ಆದರೆ, ಈ ಆರೋಪಗಳನ್ನು ಆಧಾರರಹಿತ ಎಂದು ‘ದಿ ವೈರ್‌’ ಹೇಳಿದೆ. “ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

ಕಳೆದ ತಿಂಗಳು, ಬಾರಾಬಂಕಿ ಜಿಲ್ಲಾಡಳಿತವು ರಾಮ್‌ಸ್ನೇಹಿ ಘಾಟ್ ತಹಸಿಲ್ ಆವರಣದೊಳಗಿದ್ದ ಮಸೀದಿಯನ್ನು ನೆಲಸಮ ಮಾಡಿತ್ತು. ಜಿಲ್ಲಾಡಳಿತ ಇದನ್ನು “ಅಕ್ರಮ ಕಟ್ಟಡ” ಎಂದು ಕರೆದಿದೆ. ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಜಿಲ್ಲಾಡಳಿತದ ಕ್ರಮವನ್ನು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಡಳಿತದ ಕ್ರಮದ ವಿರುದ್ಧ ವಕ್ಫ್‌ ಮಂಡಳಿಯು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಪ್ರಕರಣವು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ.

“ಜೂನ್ 23 ರಂದು, ಆನ್‌ಲೈನ್ ನ್ಯೂಸ್ ಪೋರ್ಟಲ್ ದಿ ವೈರ್‌, ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ರಾಮ್‌ಸ್ನೆಹಿ ಘಾಟ್ ತಹಸಿಲ್ ಬಗ್ಗೆಗಿನ ವೀಡಿಯೊ ಸಾಕ್ಷ್ಯಚಿತ್ರವನ್ನು ಹಂಚಿಕೊಂಡಿದೆ. ಸಾಕ್ಷ್ಯಚಿತ್ರದಲ್ಲಿ, ಅವರು ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ನೀಡಿದ್ದಾರೆ”ಎಂದು ಬರಾಬಂಕಿ ಜಿಲ್ಲಾಧಿಕಾರಿ ಆದರ್ಶ್ ಸಿಂಗ್ ಗುರುವಾರ ರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ದಿ ವೈರ್‌ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ, ‘ಜಿಲ್ಲಾಡಳಿತವು ಧಾರ್ಮಿಕ ಗ್ರಂಥಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆದಿದೆ’ ಎಂದು ಹೇಳುವಂತಹ ಹಲವಾರು ತಪ್ಪು ಮತ್ತು ಆಧಾರರಹಿತ ಹೇಳಿಕೆಗಳು ಒಳಗೊಂಡಿದೆ. ಇದು ಸುಳ್ಳಾಗಿದ್ದು, ಈ ರೀತಿಯ ಏನೂ ಸಂಭವಿಸಿಲ್ಲ. ಈ ರೀತಿಯ ತಪ್ಪು ಮಾಹಿತಿಯೊಂದಿಗೆ, ದಿ ವೈರ್‌ ಸಮಾಜದಲ್ಲಿ ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಹಾಗೂ ಕೋಮು ಸೌಹಾರ್ದತೆಗೆ ಭಂಗ ತರುತ್ತಿದೆ” ಎಂದು ಆದರ್ಶ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೊಹಮ್ಮದ್ ನಯೀಮ್ ಸಾಕ್ಷ್ಯಚಿತ್ರದಲ್ಲಿ, ‘ಧಾರ್ಮಿಕ ಪುಸ್ತಕಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆಯಲಾಗುತ್ತಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಅವರು ಹೇಳಿದ್ದಾರೆ.

ಬರಾಬಂಕಿಯ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥಿಸುತ್ತಿರುವ ಚಿತ್ರ (PC: Syed Farooq Ahmad)

“ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮುಂದಿನ ಕ್ರಮಗಳು ನಡೆಯುತ್ತಿವೆ ”ಎಂದು ಯಮುನಾ ಪ್ರಸಾದ್ ತಿಳಿಸಿದ್ದಾರೆ.

ದಿ ವೈರ್‌ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಪ್ರತಿಕ್ರಿಯಿಸಿ, “ಇದು ಕಳೆದ 14 ತಿಂಗಳುಗಳಲ್ಲಿ ದಿ ವೈರ್ ಅಥವಾ ಅದರ ಪತ್ರಕರ್ತರ ವಿರುದ್ಧ ಯುಪಿ ಪೊಲೀಸರು ಸಲ್ಲಿಸಿದ ನಾಲ್ಕನೇ ಎಫ್‌ಐಆರ್. ಈ ಪ್ರತಿಯೊಂದು ಪ್ರಕರಣಗಳು ಆಧಾರರಹಿತವಾಗಿವೆ. ಆದಿತ್ಯನಾಥ್ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ನಂಬುವುದಿಲ್ಲ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಹೇಳಿದ್ದಾರೆ.

“ಉತ್ತರಪ್ರದೇಶದಲ್ಲಿ ರಾಜಕಾರಣಿಗಳು ಮತ್ತು ಸಾಮಾಜ ವಿರೋಧಿಗಳು ಬಹಿರಂಗವಾಗಿ ಕೋಮು ದ್ವೇಷವನ್ನು ಹುಟ್ಟುಹಾಕಬಹುದು ಮತ್ತು ಹಿಂಸಾಚಾರವನ್ನು ಸಮರ್ಥಿಸಬಹುದಾಗಿದೆ. ಆದರೆ ಪೊಲೀಸರು ಇವುಗಳನ್ನು ಕೋಮು ಸಾಮರಸ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಬೆದರಿಕೆಯಾಗಿ ನೋಡುವುದಿಲ್ಲ. ಆದರೆ ಆಡಳಿತದ ಕಡೆಯಿಂದ ತಪ್ಪು ಎಂದು ಆರೋಪಿಸುವ ಜನರ ಹೇಳಿಕೆಗಳನ್ನು ಪತ್ರಕರ್ತರು ವರದಿ ಮಾಡಿದಾಗ ತಕ್ಷಣವೆ ಎಫ್‌ಐಆರ್‌ಗಳನ್ನು ತಕ್ಷಣ ದಾಖಲಿಸಲಾಗುತ್ತದೆ. ಈ ತಂತ್ರಗಳಿಗೆ ವೈರ್‌ ಬೆದರುವುದಿಲ್ಲ” ಎಂದು ಸಿದ್ದಾರ್ಥ್‌ ವರದರಾಜನ್‌ ಹೇಳಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತದಲ್ಲಿ ನಿಜ ಹೇಳುವುದೇ ಅಪರಾಧವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...