Homeಕರ್ನಾಟಕಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

ಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಶತಮಾನಗಳಿಂದ ನಮ್ಮ ಮೇಲೆ ಹೇರಲ್ಪಟ್ಟ ಮನುವಾದಿ ಮೀಸಲಾತಿಯನ್ನು ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ. ಸ್ವತಂತ್ರ ಭಾರತದಲ್ಲಿ ಮೀಸಲಾತಿಗೆ ಶಾಸನಬದ್ಧತೆಯನ್ನು ತಂದು ಕೊಟ್ಟವರು ಅಂಬೇಡ್ಕರ್‌ರವರು ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಆಯೋಜಿಸಿದ್ದ, ’ಮೀಸಲಾತಿ ನೂರು ವರ್ಷ’ ಕುರಿತ ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವರು ಸಂವಿಧಾನ ಎಂದರೆ ಮೀಸಲಾತಿ, ಮೀಸಲಾತಿ ಎಂದರೆ ಸಂವಿಧಾನ ಎಂದು ತಪ್ಪಾಗಿ ಭಾವಿಸಿದ್ದಾರೆ. ಮೀಸಲಾತಿ ಸಂವಿಧಾನದ ಒಂದು ಅಂಶವೇ ಹೊರತು ಮೀಸಲಾತಿಯೇ ಸಂವಿಧಾನವಲ್ಲ. ಸಂವಿಧಾನ ಆಡಳಿತಕ್ಕೆ ಬೇಕಾದಂತ ಎಲ್ಲಾ ತಾಂತ್ರಿಕ ಮತ್ತು ತಾತ್ವಿಕ ಚೌಕಟ್ಟನ್ನು ಒದಗಿಸಿದೆ. ಸಂವಿಧಾನ ಶಾಸ್ತ್ರಕ್ಕೆ ಸಿಗದ ಸಂವೇದನೆ. ಇಲ್ಲಿ ಸಂವೇದನೆ ಎಂದರೆ ಸಾಮಾಜಿಕ ನ್ಯಾಯದ ಆಶಯ, ಸಮಾನತೆಯ ಆಶಯವಾಗಿದೆ ಎಂದರು.

ಮೀಸಲಾತಿಯಿಂದ ಪ.ಜಾತಿ/ಪ.ಪಂಗಡದವರಿಗೆ ಮಾತ್ರ ಉದ್ಯೋಗ ಸಿಕ್ಕಿದೆ ಎಂದು ಬಹಳಷ್ಟು ಜನರಿಗೆ ಅಸಮಾಧಾನವಿದೆ. ಮೀಸಲಾತಿಯಿಂದ ಅನೇಕ ಸುಧಾರಣೆಗಳು ನಡೆದಿವೆ ನಿಜ, ಆದರೆ ಮೀಸಲಾತಿಯ ಕುರಿತು ಅಸಹನೆ ವ್ಯಕ್ತಪಡಿಸುವಷ್ಟು ಉನ್ನತ ಉದ್ಯೋಗಗಳು ದಲಿತರಿಗೆ ಸಿಕ್ಕಿವೆ ಎನ್ನುವುದು ಸತ್ಯವಲ್ಲ. ಯೋಗೇಂದ್ರಯಾದವ್ ಅವರ ಸಮೀಕ್ಷೆಯ ವರದಿ ಮತ್ತು ಕೇಂದ್ರ ಸರ್ಕಾರದ ಅಂಕಿ ಅಂಶಗಳನ್ನು ನೋಡಿದರೆ ದೊಡ್ಡ ದೊಡ್ಡ ಸಂಸ್ಥೆಗಳಾದ ಐಐಎಂ, ಐಐಟಿಗಳಲ್ಲಿ ಎಷ್ಟು ಎಸ್ಸಿ ಎಸ್ಟಿಯ ಪ್ರಾಧ್ಯಾಪಕರು ತೀರಾ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದರು.

ಆದರೆ ಮೀಸಲಾತಿ ಮೆರಿಟ್‌ಗೆ ವಿರುದ್ಧ ಎನ್ನುವವರಿದ್ದಾರೆ. ದೇಶದ ಎಲ್ಲಾ ಉನ್ನತ ವಿವಿಗಳಲ್ಲಿ ಹಾಗು ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವರ್ಗದ ಪ್ರಾಧ್ಯಾಪಕರೆ ಇದ್ದಾರೆ. ಆದರೂ ಜಗತ್ತಿನ ಉತ್ತಮ ವಿವಿಗಳ ಪಟ್ಟಿಯಲ್ಲಿ ಭಾರತದ ಒಂದು ವಿವಿ ಇಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ಮೆರಿಟ್ ಎಂಬ ಮಿಥ್ಯೆ ಇಟ್ಟುಕೊಂಡು ಮೀಸಲಾತಿ ವಿರೋಧ ಮಾಡುವ ಪ್ರವೃತ್ತಿ ಅಪ್ಪಟ ಹುಸಿತನದ್ದು ಎಂದರು.

ಇನ್ನು ಮೀಸಲಾತಿ ವಿಚಾರಕ್ಕೆ ಬಂದರೆ, ಜಾತಿವಾದ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಮೀಸಲಾತಿ ಇರಬೇಕು. ಮೀಸಲಾತಿಯನ್ನು ಅಸಹನೀಯವಾಗಿ ಬಿಂಬಿಸುವ ವ್ಯಕ್ತಿಗಳು ನಮ್ಮ ಮಧ್ಯೆ ಇದ್ದಾರೆ. ಆದರೆ ಅವರಿಗೆ ತಿಳಿದಿರಲಿ, ಹತ್ತಾರು ಶತಮಾನಗಳಿಂದ ಮೀಸಲಾತಿ ಜಾರಿಯಲ್ಲಿದೆ. ಶಿಕ್ಷಣ, ದೇವಾಲಯ ಪ್ರವೇಶ, ಮನೆ, ಬಾವಿ ನೀರು, ಕೆರೆ, ಬೀದಿಗಳು ಕೆಲವರಿಗೆ ಮೀಸಲಾಗಿತ್ತು. ಅಷ್ಟೇ ಅಲ್ಲದೆ, ಸ್ಪರ್ಶ ಸಹ ಮೀಸಲಾಗಿತ್ತು. ಆದರೆ, ಇದನ್ನು ನಾವು ಧಿಕ್ಕರಿಸಿದ ಕಾರಣ, ಕೆಲವರು ಇಂದಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾದ ಮೀಸಲಾತಿಯನ್ನು ಟೀಕಿಸುತ್ತಾರೆ ಎಂದರು.

ಗೋಡ್ಸೆ ಕೊಲೆಗಾರ ಎನ್ನಲು ಹಿಂದೇಟು ಏಕೆ?:

ಕರ್ನಾಟಕ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ, ಸಂವಿಧಾನ ಬರೆದಿಲ್ಲ ಎಂದಿರುವುದು ಅವರ ವಿಕೃತ ಮನಸ್ಥಿತಿಯನ್ನು ತಿಳಿಸುತ್ತದೆ. ಅಷ್ಟೇ ಅಲ್ಲದೆ, ಒರಿಸ್ಸಾದ ಪಠ್ಯವೊಂದರಲ್ಲಿ ಮಹಾತ್ಮ ಗಾಂಧಿ ಅವರು ಅವಘಡದಿಂದಾಗಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಗಾಂಧಿಯನ್ನು ಹತ್ಯೆಗೈದವನು ಗೋಡ್ಸೆ ಎಂದು ಹೇಳಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು. 2018ರ ಆಗಸ್ಟ್‌ನಲ್ಲಿ ದೆಹಲಿಯ ಜಂತರ್ ಮಂತರ್ ಅಲ್ಲಿ ಭಾರತೀಯ ಸಂವಿಧಾನವನು ಸುಟ್ಟು ಅಂಬೇಡ್ಕರ್ ವಿರುದ್ಧ ದಿಕ್ಕಾರ ಕೂಗುವ ಘಟನೆ ನಡೆಯುತ್ತದೆ. 2019 ಜನವರಿಯಲ್ಲಿ ಗಾಂಧೀಜಿಯವರ ಭಾವಚಿತ್ರದಲ್ಲಿ ಅವರ ಎದೆಗೆ ಅಣಕು ಗುಂಡನ್ನು ಹಾರಿಸಿ ವಿಕಾರ ಸಂಭ್ರಮ ಪಡುವ ಘಟನೆ ನಡೆಯುತ್ತದೆ. ಇವೆಲ್ಲವೂ ದೇಶದ ಸಂವಿಧಾನವನ್ನು ಮರೆಮಾಚುವ ಹುನ್ನಾರ ಎಂದರು.

ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರ ನಡುವೆ ತಾರ್ಕಿಕ ಭಿನ್ನಾಭಿಪ್ರಾಯಗಳು ಮಾತ್ರ ಇದ್ದವು. ಅದನ್ನೇ ನೆಪವಾಗಿಟ್ಟುಕೊಂಡು ಅವರ ಅನುಯಾಯಿಗಳ ನಡುವೆ ಅಸಹನೆ ಹೆಚ್ಚಾಗಿದೆ ಎಂದ ಅವರು, ಗಾಂಧಿ ಮತ್ತು ಅಂಬೇಡ್ಕರ್ ನಮಗೆ ಮುಖ್ಯವಾಗಬೇಕು. ಇದೀಗ ಮೂಲಭೂತವಾದಿಗಳು ಗಾಂಧಿಯನ್ನು ತಳ್ಳುತ್ತಾ, ಅಂಬೇಡ್ಕರ್ ಅವರನ್ನು ವಶಪಡೆಸಿಕೊಳ್ಳುತ್ತಿರುವ ಪ್ರಕ್ರಿಯಲ್ಲಿ ನಿರತರಾಗಿರುವಾಗ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಸಮಾವೇಶದ ಅಧ್ಯಕ್ಷತೆಯನ್ನು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಡಾ.ಕಿರಣ್ ಗಾಜನೂರು, ಡಾ.ರಾಜಪ್ಪ ದಳವಾಯಿ ಸಂಘಟನೆ ಸಂಚಾಲಕರಾದ ಡಾ.ರಾಜು ಗುಂಡಾಪುರ, ಬಿ.ರಾಜಶೇಖರ ಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಇವತ್ತಿನ ಸ್ವಸ್ಥ ಸಮಸಮಾಜ ನಿರ್ಮಾಣ ದಲ್ಲಿ ಗೌರಿ ಮೇಡಮ್ ರವರ ಪತ್ರಿಕೆ ತುಂಬಾ ಆವಶ್ಯಕವಾದುದು.

  2. ಪಂಗಡ,ಪಂಗಡಗಳೊಳಗೆ ಹಣಕಾಸು ಮಾನದಂಡದಡಿಯಲ್ಲಿ ಶೇ.ನೂರು ಮೀಸಲಾತಿ ಒದಗಿಸುವುದೊಂದೇ ಮೀಸಲಾತಿ ಕಗ್ಗಂಟಿಗಿರುವ ಪರಿಹಾರ.
    ಶೆ.ಅಯ್ವತ್ತರ ಮಿತಿಯನ್ನು ತಕ್ಕ ತಿದ್ದುಪಡಿ ಮಾಡಿ ಸಡಿಲಮಾಡಬೇಕಾಗಿದೆ

  3. ಮೀಸಲಾತಿ ನೆರವಿನಿಂದ ಮೇಲೆ ಬಂದ ಪ.ಪ/ಪ.ಬುಡಕಟ್ಟು ಮಂದಿ ತನ್ನದೇ ಪಂಗಡದ ವಂಚಿತ ಮಂದಿಗೆ ತಕ್ಕ ಪಾಲು ಸಿಗುವಂತೆ ಹೆಜ್ಜೆ ಇಡಬೇಕು. ಇಲ್ಲವಾದರೆ, ಮೀಸಲಾತಿ ಒಪ್ಪದವರ ಎದುರು ದಾಳಿಗೆ ಪದೇಪದೇ ತುತ್ತಾಗಬೇಕಾಗುತ್ತೆ. ಇದು ಮತ್ತೆ ಕೆಲವರ ಎಲೆಕ್ಶನ್ ಇಶ್ಯೂ ಆಗಿ ಒಡಕಿಗೆ ಎಡಮಾಡಲಿದೆ.
    ಮೀಸಲಾತಿಯಿಂದ ಒಂದು ಬಗೆಯ ಹತೋಟಿ ಕೂಟ ಮೂಡಿರುವುದನ್ನೂ ಕೂಡ ಕಡೆಗಣಿಸಬಾರದು.

  4. ಈಗ ಹೆಚ್ಚುಮಂದಿಗೆ ಅನುಕೂಲವಾಗುತ್ತಿರುವ ಮೀಸಲಾತಿ ಏರ್ಪಾಡಿಗಿಂತ ಹತೋಟಿಕೂಟ ಬಡ್ತಿಯಲ್ಲಿ ತನಗೆ ಸಿಗಬೇಕಾದ ಹೆಚ್ಚಿನಪಾಲಿಗೆ ಹಾತೊರೆಯುತ್ತಿರುವ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಬಗೆಹರಿಸಿಕೊಳ್ಳಬೇಕುಉ.
    ಒಳಮೀಸಲಾತಿಯನ್ನು ಪಡೆಯಲು ಮೂಡುತ್ತಿರುವ ದಿಟವಾಗಿಯೂ ತುಳಿತಕ್ಕೊಳಗಾದವರ ಹೋರಾಟವನ್ನು ಮೀಸಲಾತಿ ಒಪ್ಪುವವರು ಬೆಂಬಲಿಸಲು ಯಾವುದೇ ನೆಪ ಹೇಳಬಾರದು.

  5. ಸದಾಶಿವ ರಿಪೋರ್ಟ್, ಸೋಸಿಯೋ ಎಕಾನಮಿಕ್ ಸರ್ವೆ ರಿಪೋರ್ಟ್ ಅನ್ನು ಬಯಲುಗೊಳಿಸಲು ಒತ್ತಾಯಿಸಬೇಕು.

  6. ಈ ಬಗ್ಗೆ ಹೆಚ್ಚಿನ ಒರೆತಮಾಡಿ ತಕ್ಕ ತಿದ್ದುಪಡಿಗೆ ಎಡೆಮಾಡಿಕೊಡಬೇಕು.

  7. ಮೀಸಲಾತಿ ಬಗೆಗೆ ಗಣಿತದಂತೆ ಪಕ್ಕಾ ಪಾರ್ಮುಲ ತಂದರೆ, ಏಳಿಗೆಗೆ ಇರುವ ದಾರಿಯತ್ತ ದಾಪುಗಾಲಿಡಬಹುದು.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...